ಸುಶಾಂತ್ ಸಿಂಗ್ ಸಾವಿಗೆ ಬಿಗ್ ಟ್ವಿಸ್ಟ್ ! ರಿಯಾ ಚಕ್ರವರ್ತಿಗಿತ್ತು ಡ್ರಗ್ಸ್ ಪೆಡ್ಲರ್ ಸಂಪರ್ಕ

0

ಮುಂಬೈ : ಬಾಲಿವುಡ್ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಆರೋಪಿಯಾಗಿರುವ ರಿಯಾ ಚಕ್ರವರ್ತಿ ಹಾಗೂ ಆಕೆಯ ಸಹೋದರ ಶುವಿಕ್ ಗೆ ಡ್ರಗ್ಸ್ ಪೆಡ್ಲರ್ ಜೊತೆಗೆ ಸಂಪರ್ಕವಿತ್ತು ಅನ್ನೋ ವಿಚಾರ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಎನ್ ಸಿಬಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಸುಶಾಂತ್ ಸಿಂಗ್ ಸಾವಿನ ಬೆನ್ನಲ್ಲೇ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಅದೊಂದು ಸಹಜ ಸಾವಲ್ಲ ಕೊಲೆಯೆಂದು ಸುಶಾಂತ್ ಸಿಂಗ್ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬೆನ್ನಲ್ಲೇ ಸುಶಾಂತ್ ಸಿಂಗ್ ಸಾವಿಗೆ ಡ್ರಗ್ಸ್ ಮಾಫಿಯಾದ ಲಿಂಕ್ ಸಿಕ್ಕಿದೆ. ಡ್ರಗ್ಸ್ ಜಾಲದ ಕೈವಾಡ ಶಂಕೆಯ ವ್ಯಕ್ತವಾಗುತ್ತಿದ್ದಂತೆಯೇ ನಾರ್ಕೆಟಿಕ್ಸ್ ಕಂಟ್ರೋಲ್ ಬ್ಯುರೊ (ಎನ್​ಸಿಬಿ) ತನಿಖೆ ಚುರುಕುಗೊಳಿಸಿದ್ದು, ಹಲವರನ್ನು ವಿಚಾರಣಗೆಒಳಪಡಿಸಿದೆ.

ರಿಯಾ ಚಕ್ರವರ್ತಿಯನ್ನ ತೀವ್ರ ವಿಚಾರಣೆಗೆ ಒಳಪಡಿಸಿರುವ ಎನ್ ಸಿಬಿ ಅಧಿಕಾರಿಗಳು ಬಂಧಿಸುವ ಸಾಧ್ಯತೆಯೂ ಇದೆ. ಇನ್ನು ರಿಯಾ ಮಾತ್ರವಲ್ಲದೇ, ಮನೆಯವರನ್ನು ಕೂಡ ವಿಚಾರಣೆಗೆ ಒಳಪಡಿಸಿದ್ದಾರೆ.

ಈ ನಡುವಲ್ಲೇ ಸುಶಾಂತ್ ಸಿಂಗ್ ರಜಪೂತ್ ಸಾವಿಗೂ ಮುನ್ನ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಅನ್ನುವ ಅಂಶ ಪತ್ತೆಯಾಗಿದೆ. ಸುಶಾಂತ್ ಸಿಂಗ್ ರಜಪೂತ್ ಸಾವನ್ನಪ್ಪುವ 6 ದಿನಗಳ ಮೊದಲು ಸಹೋದರಿ ಪ್ರಿಯಾಂಕ ಜೊತೆಗೆ ತನ್ನ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ತಂಗಿಯೊಂದಿಗೆ ಚಾಟ್ ಮಾಡಿರುವ ಸುಶಾಂತ್ ಸಿಂಗ್ ಗೆ ಅವರಿಗೆ ಮಾನಸಿಕ ಮಾತ್ರೆಗಳನ್ನು ತೆಗೆದುಕೊಳ್ಳುವಂತೆ ಪ್ರಿಯಾಂಕ ಸಲಹೆ ನೀಡಿದ್ದಾರೆನ್ನಲಾಗುತ್ತಿದೆ.

ಇನ್ನೊಂದೆಡೆ ಸುಶಾಂತ್ ಸಿಂಗ್ ಅವರ ಖಾತೆಯಿಂದ ರಿಯಾ ಚಕ್ರವರ್ತಿ ಅಕ್ರಮವಾಗಿ ಹಣ ವರ್ಗಾವಣೆಯನ್ನು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆಯೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಯನ್ನು ನಡೆಸಲಾಗುತ್ತಿದೆ.

ಈಗಾಗಲೇ ಸುಶಾಂತ್​ ಸಿಂಗ್ ಸಹಾಯಕ ನೀರಜ್ ಸಿಂಗ್, ಸ್ನೇಹಿತ ಸಿದ್ಧಾರ್ಥ್ ಪಿಠಾನಿ, ಅಡುಗೆ ಕೆಲಸದ ಕೇಶವ್ ಮತ್ತು ಮಾಜಿ ವ್ಯವಸ್ಥಾಪಕಿ ಶ್ರುತಿ ಮೋದಿಯನ್ನು ಮುಂಬೈನ ಡಿಆರ್​ಡಿಒ ಅತಿಥಿ ಗೃಹದಲ್ಲಿ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಲಾಗಿದೆ. ಅಲ್ಲದೇ ಗೋವಾ ಮೂಲದ ಹೋಟೆಲ್ ಉದ್ಯಮಿ ಗೌರವ್ ಆರ್ಯ ಅವರನ್ನು ಸತತ ಎರಡನೇ ದಿನ ವಿಚಾರಣೆಗೆ ಒಳಪಡಿಸಿದ್ದಾರೆ.

Leave A Reply

Your email address will not be published.