ಯುವನಟ ಸುಶಾಂತ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

0

ನವದೆಹಲಿ : ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಸುಶಾಂತ್ ಸಿಂಗ್ ರಜಪುತ್ ಓರ್ವ ಪ್ರತಿಭಾವಂತ ಯುವನಟ. ಟಿವಿ ಮತ್ತು ಸಿನಿಮಾ ಕ್ಷೇತ್ರಗಳಲ್ಲಿ ಅವರು ಉತ್ತಮ ಸಾಧನೆ ತೋರಿದ್ದು, ಬಹಳ ಬೇಗ ಹೊರಟು ಹೋಗಿದ್ದಾರೆ ಎಂದು ಹೇಳಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ನಿಧನ ಆಘಾತವನ್ನು ತಂದಿದೆ. ಮನೋರಂಜನಾ ಕ್ಷೇತ್ರದಲ್ಲಿ ರಜಪೂತ್ ಅನೇಕರಿಗೆ ಸ್ಪೂರ್ತಿಯನ್ನು ನೀಡಿದ್ದಾರೆ. ಅಲ್ಲದೇ ಸ್ಮರಣೀಯ ನೆನಪುಗಳನ್ನು ಅವರು ಬಿಟ್ಟು ಹೋಗಿದ್ದಾರೆ. ಹೀಗಾಗಿ ಅವರಿಗೆ ಹಾಗೂ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರ ದಿ ಅನ್ಟೋಲ್ಡ್ ಸ್ಟೋರಿ ಸಿನಿಮಾ ಮೂಲಕ ಬಹು ಪ್ರಖ್ಯಾತಿಯನ್ನು ಪಡೆದುಕೊಂಡಿದ್ದಾರೆ. ಕಿರುತೆರೆಯಲ್ಲಿ ಮಿಂಚು ಹರಿಸಿದ್ದ ಸುಶಾಂತ್ ಸಿಂಗ್ ಕಾಯ್ ಪೋ ಚೆ ಚಿತ್ರದ ಮೂಲಕ ನಟ ಹಿಂದಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

Leave A Reply

Your email address will not be published.