Nandamuri Balakrishna : ಖ್ಯಾತ ತೆಲುಗು ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು

ತೆಲುಗು ಚಿತ್ರರಂಗದ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭುಜದ ಸಮಸ್ಯೆಯ ಹಿನ್ನೆಲೆಯಲ್ಲಿ ಅವರನ್ನು ಹೈದರಾಬಾದ್‌ನ ಬಂಜಾರ ಹಿಲ್ಸ್‌ನಲ್ಲಿರುವ ಕೇರ್‌ ಎಂಬ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಲವು ವರ್ಷಗಳ ಹಿಂದೆ ನಟ ನಂದಮೂರಿ ಬಾಲಕೃಷ್ಣ ಅವರಿಗೆ ಸಿನಿಮಾ ಶೂಟಿಂಗ್‌ ಸಮಯದಲ್ಲಿ ಭುಜಕ್ಕೆ ಪೆಟ್ಟಾಗಿತ್ತು. ಕಳೆದ ಆರು ತಿಂಗಳಿನಿಂದಲೂ ಅವರು ಭುಜದ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಶಸ್ತ್ರ ಚಿಕಿತ್ಸೆಗೆ ಒಳಪಡಿಸಿದ್ದು ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

61 ವರ್ಷ ವಯಸ್ಸಿನ ಬಾಲಕೃಷ್ಣ ಅವರು ಇಂದಿಗೂ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದಾರೆ. ಅವರ ನಟನೆಯ ಅಖಂಡ ಸಿನಿಮಾ ಇದೇ ತಿಂಗಳಲ್ಲಿ ತೆರೆಗೆ ಬರುತ್ತಿದೆ. ಇನ್ನು ಕಿರುತೆರೆಯಲ್ಲಿಯೂ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದಾರೆ. ನೂರಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ನಂದಮೂರಿ ಬಾಲಕೃಷ್ಣ ಅವರ ನಟನೆಯ ಎರಡು ಸಿನಿಮಾದ ಶೂಟಿಂಗ್‌ ಸದ್ಯದಲ್ಲಿಯೇ ಆರಂಭವಾಗಲಿದೆ.

ಇದನ್ನೂ ಓದಿ : ಅಪ್ಪು ನಿಧನಕ್ಕೂ ಮುನ್ನ ನಡೆದಿದ್ದೇನು ? ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ ಸತ್ಯ

ಇದನ್ನೂ ಓದಿ : ಅಪ್ಪು ಫ್ಯಾನ್ಸ್ ಗೆ ಸಿಹಿಸುದ್ದಿ: ನಗರದಲ್ಲಿ ನಿರ್ಮಾಣವಾಗಲಿದೆ ಪುನೀತ್ ಪ್ರತಿಮೆ

ಅಣ್ಣಾವ್ರ ಕುಟುಂಬದ ಜೊತೆಗೆ ನಿಕಟ ಸಂಪರ್ಕವನ್ನು ಹೊಂದಿರುವ ನಂದಮೂರಿ ಬಾಲಕೃಷ್ಣ ಅವರು, ಪುನೀತ್‌ ರಾಜ್‌ ಕುಮಾರ್‌ ಅವರು ನಿಧನರಾಗುತ್ತಲೇ ಬೆಂಗಳೂರಿಗೆ ಆಗಮಿಸಿ, ಪಾರ್ಥಿವ ಶರೀರ ನೋಡಿ ಬಾವುಕರಾಗಿದ್ದರು. ಶಿವರಾಜ್‌ ಕುಮಾರ್‌ ಅವರನ್ನು ಅಪ್ಪಿಕೊಂಡು ಸಾಂತ್ವಾನ ಹೇಳಿದ್ದರು. ಇದೀಗ ಬಾಲಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿರುವುದು ಅಭಿಮಾನಿಗಳಿಗೆ ಆತಂಕವನ್ನು ಮೂಡಿಸಿದೆ. ಆದರೆ ವೈದ್ಯರು ಯಾವುದೇ ಸಮಸ್ಯೆಯಿಲ್ಲ ಎಂದಿದ್ದಾರೆ.

(Telugu Actor Nandamuri Balakrishnan Admitted Hospital Shoulder Surgery )

Comments are closed.