Threat letter to Sudeep: ಬಿಜೆಪಿ ಸೇರ್ಪಡೆ ಸುದ್ದಿ ಬೆನ್ನಲ್ಲೇ ಸುದೀಪ್‌ ಗೆ ಬೆದರಿಕೆ ಪತ್ರ : ಸಿಸಿಬಿ ಪೊಲೀಸರಿಂದ ತನಿಖೆ

ಬೆಂಗಳೂರು : (Threat letter to Sudeep) ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ದಿನದಿಂದ ದಿನಕ್ಕೆ‌ ರಾಜಕೀಯ ವಿವಿಧ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಸುದೀಪ್ ಕಮಲ ಪಾಳಯ ಸೇರೋದು ಬಹುತೇಕ ಖಚಿತ ಎನ್ನಲಾಗ್ತಿದೆ. ಈ ಬೆನ್ನಲ್ಲೆ ಕಿಚ್ಚ ಸುದೀಪ್‌ ಗೆ ಬೆದರಿಕೆ ಪತ್ರವೊಂದು ಬಂದಿದ್ದು, ಈ ಸಂಬಂಧ ಸಿಸಿಬಿ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಸುದೀಪ್ ಕಮಲ ಪಾಳಯ ಸೇರೋದು ಬಹುತೇಕ ಖಚಿತ ಎನ್ನಲಾಗ್ತಿದೆ. ಈ ಹಿಂದೆಯೂ ಹಲವು ಭಾರಿ ಸುದೀಪ್ ರಾಜಕೀಯಕ್ಕೆ ಧುಮುಕುತ್ತಾರೆ ಎಂಬ ಮಾತು ಕೇಳಿ ಬಂದಿತ್ತಾದರೂ ಸುದೀಪ್ ಯಾವುದನ್ನು ಖಚಿತಪಡಿಸಿರಲಿಲ್ಲ. ಆದರೆ ಈಗ 2023 ರ ವಿಧಾನಸಭಾ ಚುನಾವಣೆ ಹೊತ್ತಿನಲ್ಲಿ ನಟ ಕಿಚ್ಚ ಸುದೀಪ್ ನೇರವಾಗಿ ಬಿಜೆಪಿ ಬೆಂಬಲಿಸಲಿದ್ದು, ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗ್ತಿದೆ. ಮೂಲಗಳ ಮಾಹಿತಿ ಪ್ರಕಾರ, ಸುದೀಪ್ ಈ ಭಾರಿ ಬಿಜೆಪಿ ಪಕ್ಷದ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡಲಿದ್ದು ರಾಜ್ಯದಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಹೀಗಿರುವಾಗ ನಟ ಸುದೀಪ್‌ ಗೆ ಬೆದರಿಕೆಯ ಪತ್ರವೊಂದು ಬಂದಿದೆ. ಸುದೀಪ್‌ ಗೆ ಈ ರೀತಿಯಾಗಿ ಬೆದರಿಕೆ ಪತ್ರ ಬಂದಿದ್ದು, ಆತಂಖ ಮೂಡಿಸಿದೆ. ನಟ ಸುದೀಪ್ ಅವರ ಮ್ಯಾನೇಜರ್ ಆದ ಜಾಕ್ ಮಂಜುಗೆ ಈ ಪತ್ರ ಸಿಕ್ಕಿದ್ದು, ಈ ಪತ್ರದಲ್ಲಿ ಸುದೀಪ್ ಬಗ್ಗೆ ಕೆಟ್ಟ ಪದಗಳ ಬಳಕೆ ಆಗಿದೆ. ಅಲ್ಲದೇ ಅವರ ಖಾಸಗಿ ವಿಡಿಯೋ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಲಾಗಿದೆ. ಇದೀಗ ಪುಟ್ಟೇನಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 506, ಸೆಕ್ಷನ್ 504 ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದು, ಪತ್ರದ ಬಗ್ಗೆ ಸಂಪೂರ್ಣ ತನಿಖೆ ನಡೆಯುತ್ತಿದೆ. ಅಲ್ಲದೇ ಪುಟ್ಟೇನಹಳ್ಳಿ ಪೊಲೀಸರು ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿದ್ದು, ಸಿಸಿಬಿ ಪೊಲೀಸರು ಅಖಾಡಕ್ಕಿಳಿದಿದ್ದಾರೆ.

ರಾಜ್ಯದ ಚುನಾವಣೆ ಬಳಿಕ ಸುದೀಪ್ ರಾಷ್ಟ್ರ ರಾಜಕಾರಣದಲ್ಲೂ ಸಕ್ರಿಯರಾಗಲಿದ್ದಾರೆ ಎನ್ನಲಾಗ್ತಿದೆ. ಈ ಹಿಂದೆ ಸುದೀಪ್ ರನ್ನು ಕಾಂಗ್ರೆಸ್ ಸೇರಿಸಿಕೊಳ್ಳುವ ಪ್ರಯತ್ನ ಹಲವು ಭಾರಿ ನಡೆದಿತ್ತು. ನಟಿ ಹಾಗೂ ಮಾಜಿ ಸಂಸದೆ ರಮ್ಯ ಸುದೀಪ್ ರನ್ನು ಬಹಿರಂಗವಾಗಿ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ದರು. ಆದರೆ ಆ‌ ಸಂದರ್ಭದಲ್ಲಿ ಸುದೀಪ್ ರಾಜಕೀಯ ಪ್ರವೇಶವನ್ನು ಅಲ್ಲಗಳೆಯುತ್ತಲೇ ಬಂದಿದ್ದರು. ಈಗ ಚುನಾವಣೆ ಹೊತ್ತಿನಲ್ಲಿ ಸುದೀಪ್‌ ಮೋದಿಯವರ ವಿಚಾರಧಾರೆ ಮೆಚ್ಚಿ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗ್ತಿದ್ದು, ಇಂದು ಅಧಿಕೃತ ಪ್ರಕಟಣೆ ಬಳಿಕ ಸುದೀಪ್ ಹಾದಿ ಇನ್ನಷ್ಟು ಸ್ಪಷ್ಟವಾಗಲಿದೆ. ಈ ಮಧ್ಯೆ ವಾಲ್ಮೀಕಿ ಸಮುದಾಯಕ್ಕೆ ಸೇರಿದ ಸುದೀಪ್ ಬಿಜೆಪಿಯಿಂದ ಚಿತ್ರದುರ್ಗದಲ್ಲಿ ಎಲೆಕ್ಷನ್ ಕಣಕ್ಕಿಳಿಯಲಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಇದನ್ನೂ ಓದಿ : Sudeep join BJP : ಕಮಲ ಮುಡಿದ ಕಿಚ್ಚ: ಬಿಜೆಪಿ ಸೇರಲಿದ್ದಾರಾ ನಟ ಸುದೀಪ್

ಇಂದು ನಟ ಸುದೀಪ್ ಬೆಂಗಳೂರಿನ ಹೊಟೇಲ್‌ವೊಂದರಲ್ಲಿ ಸುದ್ದಿ ಗೋಷ್ಠಿ ಕರೆದಿದ್ದು ಈ ಸುದ್ದಿ ಗೋಷ್ಠಿಯಲ್ಲಿ ಅಧಿಕೃತವಾಗಿ ಸುದೀಪ್ ಬಿಜೆಪಿ ಸೇರ್ಪಡೆಯನ್ನು ಘೋಷಿಸಲಿದ್ದಾರೆ ಎನ್ನಲಾಗ್ತಿದೆ.

Threat letter to Sudeep after news of joining BJP Investigation by CCB police

Comments are closed.