ವಾಲ್ಮೀಕಿ ಜಾತ್ರೆಗೆ ಸುದೀಪ್ ಬಾರದ್ದಕ್ಕೆ ಫ್ಯಾನ್ಸ್ ಆಕ್ರೋಶ : ಕರೆದಿದ್ದರೆ ಖಂಡಿತ ಬರುತ್ತಿದ್ದೆ ಎಂದ ಸುದೀಪ್!

ಸ್ಯಾಂಡಲ್‌ವುಡ್‌ ನಟ‌ ಕಿಚ್ಚ ಸುದೀಪ್ ಅಪಾರವಾದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಸಿನಿರಂಗಕ್ಕೆ ಕಾಲಿಟ್ಟು 27 ವರ್ಷಗಳನ್ನು ಪೂರೈಸಿರುವ ನಟ ಸುದೀಪ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರುವ ನಟರಲ್ಲಿ ಒಬ್ಬರು. ಇನ್ನು ನಟ ಸುದೀಪ್ ಅವರನ್ನು ಭೇಟಿ ಮಾಡಬೇಕೆಂಬುದು ಅವರ ಪ್ರತಿಯೊಬ್ಬ ಅಭಿಮಾನಿಯ ಆಶಯ. ಹೀಗಾಗಿಯೇ ರಾಜ್ಯದ ವಿವಿಧ ಊರುಗಳಿಂದ ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಲು ಬೆಂಗಳೂರಿನವರೆಗೂ ಬರುವವರಿದ್ದಾರೆ. ಹೀಗೆ ಕಿಚ್ಚನಿಗಾಗಿ ಬೆಂಗಳೂರಿವರೆಗೂ ಹುಡುಕಿಕೊಂಡು ಬರುವ ಅಭಿಮಾನಿಗಳಿಗೆ ತಮ್ಮ ನೆಚ್ಚಿನ ನಟ ತಮ್ಮ ಊರಿಗೇ ಬರಲಿದ್ದಾರೆ ಎಂದು ತಿಳಿದರೆ ಸುಮ್ಮನೆ ಇರುತ್ತಾರಾ? ಕಿಚ್ಚನ ಫೋಟೊ ಹಿಡಿದು, ನೆಚ್ಚಿನ ನಟನನ್ನು ಸ್ವಾಗತಿಸಲು ಬ್ಯಾನರ್ ಕಟ್ಟಿ, ಹೂವು, ಹಾರ ಸಿದ್ಧಪಡಿಸಿಕೊಂಡು ಕಾತರರಾಗಿ ಕಾಯುತ್ತಿರುತ್ತಾರೆ. ಇಂತಹದೊಂದು ಸನ್ನಿವೇಶ ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿ (Valmiki Jathre 2023) ನಡೆದಿದೆ.

ಇದೇ ರೀತಿ ನಿನ್ನೆ ( ಫೆಬ್ರವರಿ 9 ) ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿಯ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಜನ ಕಿಚ್ಚ ಸುದೀಪ್ ರಾಜನಹಳ್ಳಿಯಲ್ಲಿ ನಡೆದ ಜಾತ್ರಾ ಮಹೋತ್ಸವದ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಕಾರ್ಯಕ್ರಮದಲ್ಲಿ ಜಮಾಯಿಸಿದ್ದರು. ನೆಚ್ಚಿನ ನಟನ ಆಗಮನಕ್ಕಾಗಿ ಕಾದು ಕುಳಿತು ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಕಿಚ್ಚ, ಕಿಚ್ಚ ಎಂದು ಘೋಷಣೆ ಕೂಗಲಾರಂಭಿಸಿದರು. ಇನ್ನು ಕಾರ್ಯಕ್ರಮ ಶುರುವಾಗಿ ಬಹಳ ಸಮಯ ಕಳೆದರೂ ಸುದೀಪ್ ಆಗಮನವಾಗದೇ ಇದ್ದದ್ದನ್ನು ಕಂಡ ಕಿಚ್ಚ ಸುದೀಪ್ ಅಭಿಮಾನಿಗಳು ಕಿಚ್ಚ ಎಲ್ಲಿ ಎಂದು ಘೋಷಣೆ ಕೂಗುತ್ತಾ ಕಾರ್ಯಕ್ರಮದ ಆಯೋಜಕರ ವಿರುದ್ಧ ಕಿಡಿಕಾರಿದರು. ಆದರೆ ಕಾರ್ಯಕ್ರಮ ಮುಗಿದರೂ ಸಹ ಕಿಚ್ಚ ಸುದೀಪ್ ಬರಲೇ ಇಲ್ಲ. ಇದರಿಂದ ಕೋಪಗೊಂಡ ಸುದೀಪ್ ಅಭಿಮಾನಿಗಳು ಅಲ್ಲಿದ್ದ ಕುರ್ಚಿಗಳನ್ನು ಹೊಡೆದುಹಾಕಿ ಆಕ್ರೋಶ ಹೊರಹಾಕಿದರು. ಇನ್ನು ಸುದೀಪ್ ಈ ರೀತಿ ಯಾಕೆ ಮಾಡಿದ್ರು ಎಂಬ ಪ್ರಶ್ನೆಯೂ ಸಹ ಎದ್ದಿತ್ತು.

ಹೀಗೆ ಕಾರ್ಯಕ್ರಮಕ್ಕೆ ಬಾರದ ಕಿಚ್ಚ ಸುದೀಪ್ ವಿರುದ್ಧ ಅಭಿಮಾನಿಗಳು ಬೇಸರಗೊಂಡರು. ತಮ್ಮ ನೆಚ್ಚಿನ ನಟನನ್ನು ನೋಡಲು ಇಷ್ಟು ಕಾತರರಾಗಿದ್ದೇವೆ. ಆದರೆ ಸುದೀಪ್ ಮಾತ್ರ ಕಾರ್ಯಕ್ರಮಕ್ಕೆ ಬಾರಲೇ ಇಲ್ಲ ಎಂದು ಬೇಸರ ಹೊರಹಾಕಿದ್ದರು. ಕಾರ್ಯಕ್ರಮ ಆಯೋಜಿಸಿದ್ದವರ ವಿರುದ್ಧ ಘೋಷಣೆ ಕೂಗಿದ ಸುದೀಪ್ ಅಭಿಮಾನಿಗಳು ತಮ್ಮಲ್ಲಿದ್ದ ನೋವನ್ನು ಈ ಮೂಲಕ ಹೊರಹಾಕಿದ್ದಾರೆ. ವಾಲ್ಮೀಕಿ ಪೀಠಾಧಿಪತಿ ಪ್ರಸನ್ನಾನಂದಪುರಿ ಸ್ವಾಮೀಜಿ ಕಾರ್ಯಕ್ರಮದ ಮಧ್ಯದಲ್ಲಿ ಸುದೀಪ್ ಇನ್ನೇನು ಬರಲಿದ್ದಾರೆ ಎಂದು ನೀಡಿದ್ದ ಹೇಳಿಕೆಯಿಂದ ಕಿಚ್ಚ ಬಂದೇ ಬರುತ್ತಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳು ಕೊನೆಗೆ ಕಿಚ್ಚನನ್ನು ನೋಡಲಾಗದೇ ಆಕ್ರೋಶ ಹೊರಹಾಕಿ ಸಪ್ಪೆ ಮುಖ ಹಾಕಿಕೊಂಡು ಮನೆಗಳತ್ತ ತೆರಳಿದರು.

ಹೀಗೆ ತಾವು ಕಾರ್ಯಕ್ರಮಕ್ಕೆ ಬರದಿದ್ದ ಕಾರಣದಿಂದಾಗಿ ತಮ್ಮ ಅಭಿಮಾನಿಗಳು ಆಕ್ರೋಶ ಹೊರಹಾಕಿದ ಸುದ್ದಿ ಕಿವಿಗೆ ಬಿದ್ದೊಡನೆ ಮಧ್ಯರಾತ್ತಿ ಟ್ವೀಟ್ ಮಾಡಿರುವ ಸುದೀಪ್ ತನಗೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಯಾವುದೇ ರೀತಿಯ ಆಹ್ವಾನ ಬಂದಿಲ್ಲ ಎಂದಿದ್ದಾರೆ. ‘ಸ್ನೇಹಿತರಿಗೆ ನಲ್ಮೆಯ ನಮಸ್ಕಾರ -ದಾವಣಗೆರೆಯ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು. ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ. ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ. ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ. ಆದರೂ ಇಂದು ನಡೆದ ಘಟನೆಯ ಬಗ್ಗೆ ತೀವ್ರ ವಿಷಾದವಿದೆ.ನಿಮ್ಮ ಜೊತೆ ಬೆರೆಯಲು ನನಗೂ ಸದಾ ಆತೀವ ಆಸೆ.. ಮುಂದೆ ಖಂಡಿತ ಬರುವೆ. ಪ್ರೀತಿ ಇರಲಿ. ಶಾಂತ ರೀತಿಯಿಂದ ವರ್ತಿಸಿ. ಪ್ರೀತಿಯೊಂದಿಗೆ ನಿಮ್ಮ ಕಿಚ್ಚ….’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : Golden Star Ganesh: ಕಪಿಲ್ ಶರ್ಮಾ ಶೋದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ : ವಿಡಿಯೋ ವೈರಲ್

ಇದನ್ನೂ ಓದಿ : ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ಅಭಿನಯ ನಾಪತ್ತೆ : ಖ್ಯಾತ ನಟಿಗಾಗಿ ಪೊಲೀಸರ ಶೋಧ

ಇದನ್ನೂ ಓದಿ : Anup Revanna birthday: ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಅನೂಪ್ ರೇವಣ್ಣ – ‘ಹೈಡ್ ಅಂಡ್ ಸೀಕ್’ ಪೋಸ್ಟರ್ ಲಾಂಚ್

ಇತ್ತ ಕಿಚ್ಚ ಸುದೀಪ್ ನನಗೆ ಆಹ್ವಾನವೇ ಇರಲಿಲ್ಲ, ಇದ್ದಿದ್ದರೆ ಬರುತ್ತಿದ್ದೆ ಎಂದು ಟ್ವೀಟ್ ಮಾಡಿದ್ದರೆ, ಅತ್ತ ವಾಲ್ಮೀಕಿ ಪೀಠಾಧಿಪತಿ ಪ್ರಸನ್ನಾನಂದಪುರಿ ಸ್ವಾಮೀಜಿ ಹಾಗೂ ಆಯೋಜಕರು ಸುದೀಪ್ ಬರಲಿದ್ದಾರೆ ಎಂದು ಅಭಿಮಾನಿಗಳಿಗೆ ತಿಳಿಸಿದ್ದರಂತೆ. ಸದ್ಯ ಈ ಎರಡು ಹೇಳಿಕೆಗಳಿಂದ ಅಲ್ಲಿನ ಅಭಿಮಾನಿಗಳು ಗೊಂದಲಕ್ಕೆ ಒಳಗಾಗಿರುವುದಂತೂ ಖಚಿತ.

Valmiki Jathre 2023: Fans outraged over Sudeep not coming to Valmiki Jathre: Sudeep said he would have come if called!

Comments are closed.