B.Y Vijayendra : ಮೃತ ಪ್ರವೀಣ್​ ನೆಟ್ಟಾರು ನಿವಾಸಕ್ಕೆ ಬಿ.ವೈ ವಿಜಯೇಂದ್ರ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ದಕ್ಷಿಣ ಕನ್ನಡ : B.Y Vijayendra : ಕಡಲ ನಗರಿಯನ್ನೇ ಬೆಚ್ಚಿ ಬೀಳಿಸಿರುವ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಸದಸ್ಯ ಹಾಗೂ ಭಜರಂಗದಳ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ಸಾವು ಪ್ರಕರಣ ಬಿಜೆಪಿ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ. ಸುಳ್ಯ ತಾಲೂಕು ನೆಟ್ಟಾರುವಿನಲ್ಲಿರುವ ಪ್ರವೀಣ್​ ನಿವಾಸಕ್ಕೆ ಇಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಇಂದು ಭೇಟಿ ನೀಡಿದ್ದಾರೆ.


ನೆಟ್ಟಾರುವಿನಲ್ಲಿರುವ ಬಿಜೆಪಿ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿದ ಬಿ.ವೈ ವಿಜಯೇಂದ್ರ ಪ್ರವೀಣ್​ ಪತ್ನಿ ಹಾಗೂ ಪೋಷಕರಿಗೆ ಸಾಂತ್ವನ ಹೇಳಿದರು. ಪ್ರವೀಣ್​ ನೆಟ್ಟಾರು ನಿವಾಸಕ್ಕೆ ಭೇಟಿ ನೀಡುವ ಮುನ್ನ ಮಾತನಾಡಿದ ಬಿ.ವೈ ವಿಜಯೇಂದ್ರ ನಾನೊಬ್ಬ ಸಾಮಾನ್ಯ ಪ್ರಜೆಯಾಗಿ ಹೇಳಬೇಕು ಅಂದರೆ ಪ್ರವೀಣ್​ ಮನೆಗೆ ಬಂದ ಸ್ಥಿತಿ ಯಾರಿಗೂ ಬರಬಾರದು. ಪ್ರವೀಣ್​ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಅವರ ಮನೆಯಲ್ಲಿ ಈಗ ದೀಪ ಹಚ್ಚುವವರೇ ಯಾರಿಲ್ಲ ಎಂಬಂತಾಗಿದೆ. ನಾನೊಬ್ಬ ಪಕ್ಷದ ಕಾರ್ಯಕರ್ತನಾಗಿ ಪ್ರವೀಣ್​ ನಿವಾಸಕ್ಕೆ ಭೇಟಿ ನೀಡುತ್ತಿದ್ದ ಅವರಿಗೆ ಸಾಂತ್ವನ ಹೇಳಲಿದ್ದೇನೆ ಎಂದಿದ್ದರು.


ಇದೇ ವೇಳೆ ಹಿಂದೂ ಕಾರ್ಯಕರ್ತರ ರಾಜೀನಾಮೆ ವಿಚಾರವಾಗಿಯೂ ಮಾತನಾಡಿದ ಬಿ.ವೈ ವಿಜಯೇಂದ್ರ, ಇಂತಹ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರ ಆಕ್ರೋಶ ಸಹಜ. ಕಾರ್ಯಕರ್ತನೊಬ್ಬ ಈ ರೀತಿ ದುರಂತ ಅಂತ್ಯವನ್ನು ಕಂಡಾಗ ಉಳಿದವರು ಈ ರೀತಿ ಆಕ್ರೋಶ ಹೊರ ಹಾಕುವುದು ಸಹಜ. ನನಗೂ ಇವರೆಲ್ಲರ ಆಕ್ರೋಶ, ನೋವು ಅರ್ಥವಾಗುತ್ತೆ ಎಂದು ಹೇಳಿದರು.


ಇನ್ನು ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರು ಏರ್​ಪೋರ್ಟ್​ನಲ್ಲಿ ಬಂದಿಳಿದಿದ್ದು ಇಲ್ಲಿಂದ ನೇರವಾಗಿ ನೆಟ್ಟಾರುವಿನಲ್ಲಿರುವ ಪ್ರವೀಣ್​​ ನಿವಾಸಕ್ಕೆ ತೆರಳಲಿದ್ದಾರೆ. ರಸ್ತೆ ಮಾರ್ಗದ ಮೂಲಕವೇ ಸಿಎಂ ನೆಟ್ಟಾರುವಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನು ಓದಿ : CM Basavaraja Bommai : ಪ್ರವೀಣ್​ ನೆಟ್ಟಾರು ನಿವಾಸಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಇದನ್ನೂ ಓದಿ : CT Ravi : ಪಿಎಫ್​​ಐ ಸಂಘಟನೆ ಬ್ಯಾನ್​ ಮಾಡ್ತೇವೆ, ಯಾರೂ ಸಮೂಹ ಸನ್ನಿಗೆ ಒಳಗಾಗದಿರಿ : ಕಾರ್ಯಕರ್ತರಲ್ಲಿ ಸಿ.ಟಿ ರವಿ ಮನವಿ

B.Y Vijayendra visit to Praveen Nettaru residence

Comments are closed.