Balebare Ghati Bandh: ಏಪ್ರಿಲ್ 15ರ ವರೆಗೆ ಬಾಳೆಬರೆ ಘಾಟಿ ಬಂದ್‌ : ತೀರ್ಥಹಳ್ಳಿ- ಕುಂದಾಪುರ ಸಂಚಾರ ರದ್ದು

ಶಿವಮೊಗ್ಗ : (Balebare Ghati Bandh)ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟಿ ಎರಡು ಭಾಗಗಳಲ್ಲಿ ಕಾಂಕ್ರೀಟ್‌ ಪೇವ್‌ಮೆಂಟ್‌ ನಿರ್ಮಾಣ ಕಾರ್ಯ ಪ್ರಗತಿಯಲ್ಲಿರುವ ಕಾರಣದಿಂದಾಗಿ ಬಾಳೆಬರೆ ಘಾಟಿ ತೀರ್ಥಹಳ್ಳಿ- ಕುಂದಾಪುರ ಮಾರ್ಗದಲ್ಲಿ ಏಪ್ರಿಲ್‌ 15ರ ವರೆಗೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಈ ಕಾರಣಕ್ಕೆ ಈ ಮಾರ್ಗದಲ್ಲಿ ಸಂಚಾರ ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾದೀಕಾರಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.

ರಸ್ತೆ ಕಾಮಗಾರಿ ವೇಳೆ ಹಲವು ಬಾರಿ ಯಂತ್ರೋಪಕರಣಗಳು ದುರಸ್ತಿಗೆ ಒಳಗಾದ ಕಾರಣ ಹೆಚ್ಚುವರಿಯಾಗಿ ಹತ್ತು ದಿನಗಳ ಕಾಲ ಸಂಚಾರ ನಿಷೇಧ ಅವಧಿ ವಿಸ್ತರಿಸಲಾಗಿದೆ. ಫೆ.5 ರಂದು ಬಾಳೇಬರೆ ಘಾಟಿಯಲ್ಲಿ 2570 ಮೀಟರ್ ಪೇವ್ ಮೆಂಟ್ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು ಏ.5 ರ ವರೆಗೆ ಬಾಳೇಬರೆ ಘಾಟಿಯನ್ನ ಬಂದ್ ಮಾಡಿ ಬದಲೀ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಕಾರಣಾಂತರದಿಂದ ಏ.15 ರವರೆಗೆ ಘಾಟಿಯಲ್ಲಿ ವಾಹನ ಸಂಚಾರವನ್ನ ಬಂದ್ ಮಾಡಿ ಕಾಮಗಾರಿ ಮುಂದುವರೆಸಲಾಗುತ್ತಿದೆ.

ಇನ್ನೂ ಈ ಮಾರ್ಗದಲ್ಲಿ ಸಂಚರಿಸುವ ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಹಾಲಾಡಿ-ಬಸ್ರೂರು ಅಥವಾ ತೀರ್ಥಹಳ್ಳಿ-ಹೆಬ್ರಿ-ಉಡುಪಿ-ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕು. ಘನ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಕಾನಗೋಡು-ನಗರ-ಕೊಲ್ಲೂರು ಕುಂದಾಪುರ ಈ ರಸ್ತೆ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ : ವಿಧಾನಸಭೆ ಚುನಾವಣೆ 2023 : ಎಲೆಕ್ಷನ್‌ಗೂ ಮುನ್ನ 8ನೇ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

ಇದನ್ನೂ ಓದಿ : ಕೇರಳದಲ್ಲಿ 108, ಕರ್ನಾಟಕದಲ್ಲಿ 101 : ಗಡಿಭಾಗದಲ್ಲಿ ಪೆಟ್ರೋಲ್ ಗೆ ಮುಗಿಬಿದ್ದ ಕೇರಳದ ವಾಹನ ಸವಾರರು

ಇದನ್ನೂ ಓದಿ : ಆರೋಗ್ಯ‌ ಕೇಂದ್ರಗಳಿಗೂ ಮಾದರಿ ನೀತಿ ಸಂಹಿತೆ ಪ್ರಕಟ : ಕಟ್ಟುನಿಟ್ಟಿನ ಆದೇಶ ಪಾಲನೆಗೆ ಸೂಚನೆ

Balebare Ghati Bandh: Balebare Ghati Bandh till April 15: Tirthahalli-Kundapur traffic cancelled.

Comments are closed.