ಮಾಂಸದಂಧೆಯಲ್ಲಿ ಸಿಕ್ಕಿಬಿದ್ದಳು ಪತಿಯನ್ನು ಕೊಂದು ಹೋಮಕುಂಡದಲ್ಲಿ ಸುಟ್ಟು ಹಾಕಿದ ಕೊಲೆಗಾರ್ತಿ

ಉಡುಪಿ : ಪತಿಯನ್ನು ಕೊಂದು, ಮಾಂಸದ ತುಂಡುಗಳನ್ನು ಹೋಮ ಕುಂಡದಲ್ಲಿ ಸುಟ್ಟ ಆರೋಪಿ ರಾಜೇಶ್ವರಿ ಶೆಟ್ಟಿ ವಿರುದ್ದ ಇದೀಗ ವೇಶ್ಯಾವಾಟಿಕೆ ದಂಧೆ ಪ್ರಕರಣ ದಾಖಲಾಗಿದೆ.


ದೇಶ ಮಾತ್ರವಲ್ಲ, ವಿದೇಶದಲ್ಲಿಯೂ ವ್ಯವಹಾರವನ್ನು ನಡೆಸುತ್ತಿದ್ದ ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಅವರನ್ನು 2016ರ ಜುಲೈ 28ರಂದು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ತನ್ನ ಪ್ರಿಯಕರ ನಿರಂಜನ ಭಟ್ ಹಾಗೂ ಪುತ್ರ ನವನೀತ್ ಜೊತೆ ಸೇರಿ ಪತಿಯನ್ನು ಕೊಂದು ಹೋಮ ಕುಂಡದಲ್ಲಿ ಸುಟ್ಟು ಹಾಕಿದ್ದಳು. ಪತ್ನಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದೇ ಭಾಸ್ಕರ ಶೆಟ್ಟಿ ಹತ್ಯೆಗೆ ಕಾರಣ ಅನ್ನೋದು ನಂತರದಲ್ಲಿ ತಿಳಿದು ಬಂದಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಜೈಲು ಸೇರಿದ್ದ ರಾಜೇಶ್ವರಿ 2018ರಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದಾಳೆ.

ಪ್ರಕರಣದ ಪ್ರಮುಖ ಆರೋಪಿಗಳಾಗಿರುವ ನಿರಂಜನ ಭಟ್ ಹಾಗೂ ನವನೀತ್ ಇಂದಿಗೂ ಜೈಲಿನಲ್ಲಿಯೇ ಕಂಬಿ ಎಣಿಸುತ್ತಿದ್ದಾರೆ. ಆದರೆ ಜೈಲಿನಿಂದ ಹೊರಬರುತ್ತಲೇ ರಾಜೇಶ್ವರಿ ತನ್ನ ಪತಿ ವ್ಯವಹಾರವನ್ನು ನೋಡಿಕೊಳ್ಳುವುದಕ್ಕೆ ಶುರು ಮಾಡಿದ್ದಾಳೆ. ತನ್ನ ವಶದಲ್ಲಿರುವ ದುರ್ಗಾ ಇಂಟರ್ ನ್ಯಾಷನಲ್ ಹೋಟೆಲ್ ನಲ್ಲಿ ಅಕ್ರಮ ಚಟುವಟಿಕೆ ನಡೆಸಲು ಅವಕಾಶ ನೀಡುವ ಮೂಲಕ ಮಾಂಸದಂಧೆಯಲ್ಲಿ ತೊಡಗಿಕೊಂಡಿದ್ದಾಳೆನ್ನುವ ಆರೋಪ ಕೇಳಿಬಂದಿದೆ.

https://kannada.newsnext.live/breaking-lecture-case-haveri-student/

ಡಿಸಿಐಬಿ ಪೊಲೀಸರು ಹೋಟೆಲ್ ಮೇಲೆ ದಾಳಿಯನ್ನು ನಡೆಸಿದ್ದು, ಈ ವೇಳೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರೋದು ಬೆಳಕಿಗೆ ಬಂದಿದೆ. ಹೀಗಾಗಿ ಇಬ್ಬರು ಯುವತಿಯರನ್ನು ರಕ್ಷಿಸಿದ್ದು, ಮೂವರನ್ನು ಬಂಧಿಸಿದ್ದಾರೆ. ಅಷ್ಟೇ ಅಲ್ಲಾ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗುತ್ತಿದ್ದಂತೆಯೇ ರಾಜೇಶ್ವರಿ ಎಸ್ಕೇಪ್ ಆಗಿದ್ದಾಳೆ. ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ತಿಂಗಳೊಳಗೆ ಎರಡನೇ ಬಾರಿ ಸಿಕ್ಕಿ ಬಿದ್ದಿದ್ದಾಳೆ. ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

https://kannada.newsnext.live/tamilanadu-bjp-aravkurachi-nomination-annamalai-election-2021/

Comments are closed.