Bike tanker accident: ಬೈಕ್‌ ಟ್ಯಾಂಕರ್‌ ಅಪಘಾತ: ಬೈಕ್‌ ಸವಾರ ಸ್ಥಳದಲ್ಲೇ ಸಾವು

ಕಾರ್ಕಳ: (Bike tanker accident) ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್‌ ಮತ್ತು ಬೈಕ್‌ ನಡುವೆ ಮುಖಾಮುಖಿ ಢಿಕ್ಕಿಯಾಗಿದ್ದು, ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಹಾಗೂ ಸಹ ಸವಾರೆಗೆ ಗಾಯಗಳಾಗಿರುವ ಘಟನೆ ಕಾರ್ಕಳ-ಶೃಂಗೇರಿ ರಾಷ್ಟ್ರೀಯ ಹೆದ್ದಾರಿಯ ಮಾಳ ಗೇಟ್‌ನ ಹೇರ್‌ ಪಿನ್‌ ಟರ್ನ್‌ ಎಂಬಲ್ಲಿ ನಡೆದಿದೆ. ನಿತೀನ್‌ ರಾಥೋಡ್‌ ಮೃತ ಬೈಕ್‌ ಸವಾರ.

ನಿತೀನ್‌ ರಾಥೋಡ್‌ ಹಾಗೂ ಕೀರ್ತನಾ ಇಬ್ಬರು ಬೈಕ್‌ ನಲ್ಲಿ ಕಾರ್ಕಳ-ಶೃಂಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶೃಂಗೇರಿ ಕಡೆಯಿಂದ ಮಾಳ ಕಡೆಗೆ ಸವಾರಿ ಮಾಡುತ್ತಿದ್ದು, ಈ ವೇಳೆ ಮಾಳ ಕಡೆಯಿಂದ ಶೃಂಗೇರಿ ಕಡೆಗೆ ಹೋಗುತ್ತಿದ್ದ ಟ್ಯಾಂಕರ್‌ ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರ ನಿತೀನ್‌ ರಾಥೋಡ್‌ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕೀರ್ತನಾ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯ ಘಟನೆಯ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ. ಅಪಘಾತಕ್ಕೆ ಬೈಕ್‌ ಸವಾರನ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನವೇ ಕಾರಣ ಎಂದು ಹೇಳಲಾಗುತ್ತಿದೆ.

ಬಾಲಕಿಯನ್ನು ಇರಿದು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಬಾಲಕ

ರೇವಾರಿ: ಅಪ್ರಾಪ್ತ ಬಾಲಕಿಯನ್ನು ಬಾಲಕನೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದಿದ್ದು, ಆಕೆಯನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ರೇವಾರಿಯಲ್ಲಿ ನಡೆದಿದೆ. ಸದ್ಯ ಘಟನೆಯ ಕುರಿತು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರೆಸಿದ್ದಾರೆ. ಕೊಲೆಗೆ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ.

ಅಪ್ರಾಪ್ತ ಬಾಲಕಿ ಶಾಲೆಗೆ ಹೋದವಳು ಮನೆಗೆ ಹಿಂತಿರುಗದೇ ಇದ್ದಾಗ ಆಕೆಯ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಲಕಿಯ ಶವ ಹಲವು ಇರಿತದ ಗಾಯಗಳೊಂದಿಗೆ ಪತ್ತೆಯಾಗಿದೆ. ಅಲ್ಲೆ ಪಕ್ಕದಲ್ಲಿದ್ದ ರೈಲ್ವೇ ಹಳಿಗಳ ಮೇಲೆ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವುದು ಕೂಡ ತಿಳಿದುಬಂದಿದೆ. ಇನ್ನೂ ಬಾಲಕಿಯ ಶಾಲಾ ಬ್ಯಾಗ್‌ ಹಾಗೂ ಕೊಲೆಗೆ ಬಳಸಲಾದ ಚಾಕು ಕೂಡ ಪತ್ತೆಯಾಗಿದ್ದು, ಬಾಲಕನ ಸ್ಕೂಟರ್‌ ಕೂಡ ಪೊಲೀಸರಿಗೆ ಪತ್ತೆಯಾಗಿದೆ.

ಇದನ್ನೂ ಓದಿ : Murder and suicide: ಬಾಲಕಿಯನ್ನು ಇರಿದು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಬಾಲಕ

ಇದನ್ನೂ ಓದಿ : Car fire accident: ಕಾರಿಗೆ ಬೆಂಕಿ ತಗುಲಿ ಗರ್ಭಿಣಿ, ಪತಿ ಸಜೀವ ದಹನ

Bike tanker accident: Bike tanker accident: Bike rider died on the spot

Comments are closed.