ಕ್ರಾಸ್ ಲ್ಯಾಂಡ್ ಕಾಲೇಜಿನ ಹಿರಿಯ ಉಪನ್ಯಾಸಕಿ ಜ್ಯೋತಿ ಪ್ರಕಾಶ್ ಇನ್ನಿಲ್ಲ

ಬ್ರಹ್ಮಾವರ : ಕ್ರಾಸ್ ಲ್ಯಾಂಡ್ ಕಾಲೇಜಿನ ಹಿರಿಯ ಉಪನ್ಯಾಸಕರಾದ ಜ್ಯೋತಿ ಪ್ರಕಾಶ್ (55 ವರ್ಷ) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಹಲವು ಸಮಗಳಿಂದಲೂ ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಉಡುಪಿಯ ಮೂಡುಬೆಳ್ಳೆಯ ಸೈಂಟ್ ಲಾರೆನ್ಸ್ ಹೈಸ್ಕೂಲಿನಲ್ಲಿ ಪ್ರೌಢ ಶಿಕ್ಷಣ ಹಾಗೂ ಬ್ರಹ್ಮಾವರದ ಕ್ರಾಸ್ ಲ್ಯಾಂಡ್ ಕಾಲೇಜಿನಲ್ಲಿ 1987ರಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದಾರೆ.

ತದನಂತರದಲ್ಲಿ ಪರ್ಸನಲ್ ಮ್ಯಾನೇಜ್ ಮೆಂಟ್ ಹಾಗೂ ಇತಿಹಾಸದಲ್ಲಿ ಎಂಎ ಪದವೀಧರರಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಎಂಫಿಲ್ ಪದವಿಯನ್ನು ಪಡೆದಿದ್ದರು. ತಾನು ವಿದ್ಯಾಭ್ಯಾಸವನ್ನು ಪಡೆದ ಕ್ರಾಸ್ ಲ್ಯಾಂಡ್ ಕಾಲೇಜಿನಲ್ಲಿಯೇ ಉಪನ್ಯಾಸಕರಾಗಿ ವೃತ್ತಿ ಜೀವನವನ್ನು ಆರಂಭಿಸಿದ್ದರು. ಸುಮಾರು ಎರಡೂ ದಶಕಗಳಿಗೂ ಅಧಿಕ ಕಾಲ ವಿದ್ಯಾರ್ಥಿಗಳ ನೆಚ್ಚಿನ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

2 ಬಾರಿ ಅಂತರಾಷ್ಟ್ರೀಯ ಸಮ್ಮೇಳನ ಹಾಗೂ 3 ಬಾರಿ ರಾಷ್ಟ್ರೀಯ ಸಮ್ಮೇಳನಗಳಲ್ಲಿ ಸಂಶೋಧನಾ ಪ್ರಬಂಧವನ್ನು ಮಂಡನೆ ಮಾಡಿದ ಖ್ಯಾತಿಗೆ ಪಾತ್ರರಾಗಿದ್ದರು. ಜ್ಯೋತಿ ಪ್ರಕಾಶ್ ಅವರು ಪತಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಅಪಾರ ಶಿಷ್ಯ ವರ್ಗವನ್ನು ಹೊಂದಿದ್ದ ಜ್ಯೋತಿ ಪ್ರಕಾಶ್ ಅವರ ನಿಧನಕ್ಕೆ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಉಪನ್ಯಾಸಕರ ವೃಂದ ಹಾಗೂ ಕ್ರಾಸ್ ಲ್ಯಾಂಡ್ ಕಾಲೇಜಿನ ಆಡಳಿತ ಮಂಡಳಿ ಕಂಬನಿ ಮಿಡಿದಿದೆ.

Comments are closed.