ದಕ್ಷಿಣ ಕನ್ನಡದಲ್ಲಿ ಜುಲೈ 5 ರ ವರೆಗೂ ಲಾಕ್ ಡೌನ್ : ಬಸ್ ಸಂಚಾರಕ್ಕೆ ನಿರ್ಬಂಧ : ಸಚಿವ ಕೋಟ

ಮಂಗಳೂರು : ಕೊರೊನಾ ವೈರಸ್ ಸೋಂಕು ಸಂಪೂರ್ಣವಾಗಿ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 5ರ ವರೆಗೆ ಲಾಕ್ ಡೌನ್ ಮುಂದುವರಿಕೆ ಮಾಡಲಾಗಿದೆ. ಈ ಹಿನ್ನೆಲೆ ಯಲ್ಲಿ ಬಸ್ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.

ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಕೂಡ ಕೆಲವೊಂದು ನಿರ್ಬಂಧಗಳಲ್ಲಿ ಸಡಿಲಿಕೆ ಮಾಡಲಾಗಿದೆ. ಅಗತ್ಯವಸ್ತುಗಳ ಖರೀದಿಯ ಅವಧಿಯನ್ನು ಮಧ್ಯಾಹ್ನ 1 ಗಂಟೆಯ ವರೆಗೆ ವಿಸ್ತರಣೆ ಮಾಡಲಾಗಿದೆ. ಬೀದಿ ಬದಿ ವ್ಯಾಪಾರ, ಮಾಂಸದಂಗಡಿ ತೆರೆಯಲು ಅವಕಾಶ ಕಲ್ಪಿಸ ಲಾಗಿದೆ. ಅಲ್ಲದೇ ಆಟೋ ಹಾಗೂ ಟ್ಯಾಕ್ಸಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಇಬ್ಬರು ಮಾತ್ರವೇ ಸಂಚಾರ ಮಾಡಬಹುದಾಗಿದೆ.

ಆದರೆ ಜಿಲ್ಲೆಯಲ್ಲಿ ಬಸ್ ಸಂಚಾರವನ್ನು ಸಂಪೂರ್ಣ ವಾಗಿ ನಿರ್ಬಂಧಿಸಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಕೆಎಸ್ಆರ್ ಟಿಸಿ ಹಾಗೂ ಖಾಸಗಿ ಬಸ್  ಸಂಚಾರ ಮಾಡುವುದಿಲ್ಲ.

Comments are closed.