Drug case- three arrested: ಕುಂದಾಪುರ: ಗಾಂಜಾ ಸೇವನೆ ಪ್ರತ್ಯೇಕ ಪ್ರಕರಣ: ಮೂವರು ಪೊಲೀಸರ ವಶಕ್ಕೆ

ಕುಂದಾಪುರ: (Drug case- three arrested) ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯುವಕರನ್ನು ವಶಕ್ಕೆ ಪಡೆದುಕೊಂಡ ಘಟನೆ ಕುಂದಾಪುರದ ವಡೇರಹೋಬಳಿ ಗ್ರಾಮದ ಟಿಟಿ ರಸ್ತೆ ಹಾಗೂ ಹಿರಿಯಡಕದ ಬೊಮ್ಮರಬೆಟ್ಟು ಗ್ರಾಮದ ಹಿರಿಯಡ್ಕ ಬಸ್‌ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದ ಬಳಿ ನಡೆದಿದೆ.

ಕುಂದಾಪುರದ ವಡೇರಹೋಬಳಿ ಗ್ರಾಮದ ಟಿಟಿ ರಸ್ತೆಯ ಬಳಿ ರೌಂಡ್ಸ್‌ ಕರ್ತವ್ಯದಲ್ಲಿರುವ ಸಮಯದಲ್ಲಿ ವ್ಯಕ್ತಿಯೋರ್ವರು ಕರೆ ಮಾಡಿ ವಡೇರಹೋಬಳಿ ಗ್ರಾಮದ ಟಿಟಿ ರಸ್ತೆಯ ಬಳಿ ಗಾಂಜಾ ಸೇವನೆ ಮಾಡುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ. ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿದಾಗ ಆಶಿಶ್‌ ಎನ್ನುವಾತ ಅಮಲಿನಲ್ಲಿರುವುದು ಕಂಡುಬಂದಿದೆ. ಆತನನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಆತ ಮಾದಕ ವಸ್ತು ಸೇವನೆ ಮಾಡಿರುವ ಅನುಮಾನದ ಮೇರೆಗೆ ಯುವಕನನ್ನು ವಶಕ್ಕೆ ಪಡೆದುಕೊಂಡು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ವೈದ್ಯಕೀಯ ತಪಾಸಣೆ ವರದಿಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

ಇನ್ನೂ ಹಿರಿಯಡಕ ಪೊಲೀಸ್‌ ಠಾಣಾ ವ್ಯಾಪ್ತಿಯ ಬೊಮ್ಮರಬೆಟ್ಟು ಗ್ರಾಮದ ಹಿರಿಯಡ್ಕ ಬಸ್‌ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಸುಧೀಶ ಹಾಗೂ ರೋಷನ್‌ ಎನ್ನುವ ಇಬ್ಬರು ಯುವಕರು ತೂರಾಡುತ್ತಿದ್ದು, ಇದನ್ನು ಗಮನಿಸಿದ ರೌಂಡ್ಸ್‌ ಕಾರ್ಯದಲ್ಲಿದ್ದ ಹಿರಿಯಡಕ ಪೊಲೀಸರು ಯಾವುದೋ ನಿಷೇಧಿತ ಮಾಧಕ ವಸ್ತು ಸೇವಿಸಿರುವ ಸಂಶಯದ ಮೇಲೆ ವಶಕ್ಕೆ ಪಡೆದುಕೊಂಡಿದ್ದಾರೆ. ಇಬ್ಬರನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಇಬ್ಬರು ಮಾದಕ ವಸ್ತುವನ್ನು ಸೇವಿಸಿರುವುದು ದೃಢಪಟ್ಟಿದೆ.

ಈ ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಹಾಗೂ ಹಿರಿಯಡಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಂಜಾ ಸೇವಿಸುತ್ತಿದ್ದ ಕುಂದಾಪುರದ ಆಶಿಶ್‌, ಹಿರಿಯಡಕದ ಸುಧೀಶ ಹಾಗೂ ರೋಷನ್‌ ಎನ್ನುವ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : College lecturer committed suicide: ಮಂಗಳೂರು : ಕಾಲೇಜು ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಇದನ್ನೂ ಓದಿ : Complaint against city college: ವಿದ್ಯಾರ್ಥಿಗಳಿಗೆ ಕಲುಷಿತ ಆಹಾರ ಪೂರೈಕೆ : ಮಂಗಳೂರಿನ ಸಿಟಿ ಕಾಲೇಜು ವಿರುದ್ಧ ಜಿಲ್ಲಾಧಿಕಾರಿಗಳಿಗೆ ದೂರು

Drug case- three arrested: Kundapur: A separate case of cannabis consumption: Three arrested by the police

Comments are closed.