ಬೈಂದೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೋಪಾಲ ಪೂಜಾರಿ ನಾಮಪತ್ರ ಸಲ್ಲಿಕೆ

ಬೈಂದೂರು : (Gopal Pujari nomination) ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಹಾಲಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಬೈಕ್‌ ರ್ಯಾಲಿ ಮೂಲಕ ಮೆರವಣಿಗೆ ನಡೆಸಿ ನಂತರ ಬೈಂದೂರಿನ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಯ ಹಿನ್ನಲೆಯಲ್ಲಿ ಇಂದು ಗೋಪಾಲ ಪೂಜಾರಿ ರ್ಯಾಲಿ ನಡೆಸಿದ್ದು, ಜನಸಾಗರವೇ ಹರಿದು ಬಂದಿದೆ. ತ್ರಾಸಿಯಿಂದ ರ್ಯಾಲಿ ಆರಂಭಗೊಂಡು, ಬೈಂದೂರು ಹೊಸ ಬಸ್‌ ನಿಲ್ದಾಣದ ವರೆಗೆ ಪಾದಯಾತ್ರೆ ಮೂಲಕ ಮೆರವಣಿಗೆ ಮಾಡಲಾಯಿತು. ನಂತರ ಕಾರ್ಯಕರ್ತರನ್ನುದ್ದೇಶಿಸಿ ಗೋಪಾಲ ಪೂಜಾರಿ ಅವರು ಮಾತನಾಡಿದ್ದಾರೆ. ಬಳಿಕ ಚುನಾವಣಾಧಿಕಾರಿಗ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೆ.ಗೋಪಾಲ ಪೂಜಾರಿ ಅವರು ” ಬೈಂದೂರು ಕ್ಷೇತ್ರದಲ್ಲಿ ನಾನು ನಾಲ್ಕು ಬಾರಿ ಶಾಸಕನಾಗಿದ್ದೇನೆ. ಅಧಿಕಾರ ಇದ್ದಾಗಲು ಹಾಗೇ ಅಧಿಕಾರ ಕಳೆದುಕೊಂಡಾಗಲು ಜನರ ಸೇವೆಗೆ ಸದಾ ನನ್ನನ್ನು ಮುಡುಪಾಗಿರಿಸಿಕೊಂಡು ಕ್ಷೇತ್ರದ ಸೇವೆ ಮಾಡಿದ್ದೇನೆ. ಬೈಂದೂರು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಕನಸಿನಲ್ಲಿ ತಾಲೂಕು ಕೇಂದ್ರಕ್ಕೆ ಅವಶ್ಯ ಇರುವ ಎಲ್ಲಾ ಕಛೇರಿಗಳನ್ನು ಬೈಂದೂರಿಗೆ ನನ್ನ ಅವಧಿಯಲ್ಲಿ ತಂದಿದ್ದೇನೆ. ಶಾಸಕನಾಗಿದ್ದ ಅವಧಿಯಲ್ಲಿ ನನ್ನ ಕ್ಷೇತ್ರ ಅಭಿವೃದ್ದಿಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಗಳಿಸಿತ್ತು” ಎಂದಿದ್ದಾರೆ.

ಇದನ್ನೂ ಓದಿ : Vinay Kumar Sorake nomination : ಕಾಪು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನಯ್‌ ಕುಮಾರ್‌ ಸೊರಕೆ ನಾಮಪತ್ರ ಸಲ್ಲಿಕೆ

ಇದನ್ನೂ ಓದಿ : Muniyalu Uday Kumar Shetty : ಕಾರ್ಕಳ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮುನಿಯಾಲು ಉದಯ್‌ ಕುಮಾರ್‌ ಶೆಟ್ಟಿ ನಾಮಪತ್ರ ಸಲ್ಲಿಕೆ

ಇದನ್ನೂ ಓದಿ : ಕಾಪು ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ನಾಮಪತ್ರ ಸಲ್ಲಿಕೆ

Gopal Pujari nomination: Gopal Pujari nomination of Congress candidate from Bynduru constituency

Comments are closed.