ಕೋಟ : ದೇವಸ್ಥಾನದ ಬಾವಿಗೆ ನೇಣುಬಿಗಿದು ಆತ್ಮಹತ್ಯೆ

ಕೋಟ : ದೇವಸ್ಥಾನದ ಬಾವಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯಲ್ಲಿರುವ ಶಿರಸಿ ಮಾರಿಕಾಂಬ ದೇವಸ್ಥಾನದ ಆವರಣದಲ್ಲಿ ನಡೆದಿದೆ.

ಕೋಟತಟ್ಟು ಪಡುಕರೆ ನಿವಾಸಿ ಚೆನ್ನಯ್ಯ ಪೂಜಾರಿ (51 ವರ್ಷ) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಪಡುಕರೆ ಸಮುದ್ರ ತೀರದಲ್ಲಿ ಬೀಡಾ ಅಂಗಡಿಯೊಂದನ್ನು ಇರಿಸಿಕೊಂಡು ಜೀವನ ಸಾಗಿಸುತ್ತಿದ್ದ ಚೆನ್ನಯ್ಯ ಪೂಜಾರಿ ಇಂದು ಮುಂಜಾನೆ ಬಾವಿಯ ಹಗ್ಗಕ್ಕೆ ನೇಣು ಬಿಗಿದು, ಬಾವಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಕರಣ ದಾಖಲು ಮಾಡಿಕೊಂಡಿರುವ ಕೋಟ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಚೆನ್ನಯ್ಯ ಪೂಜಾರಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಚಂದ್ರ ಪೂಜಾರಿ ಎಂಬತಾ ತೆಕ್ಕಟ್ಟೆಯ ದೇವಸ್ಥಾನದೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೇ ದೇವಳದ ಬಾವಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ.

https://kannada.newsnext.live/puc-student-murder-mulabagilu-house/

ಧಾರ್ಮಿಕ ಕ್ಷೇತ್ರಗಳ ಸನ್ನಿಧಿಯಲ್ಲೇ ಆತ್ಮಹತ್ಯೆಯ ಪ್ರಕರಣ ನಡೆಯುತ್ತಿರೋ ಕುರಿತು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಪೊಲೀಸರ ತನಿಖೆಯ ನಂತರವಷ್ಟೇ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಬೇಕಾಗಿದೆ.

Comments are closed.