ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ನಾಮಪತ್ರ ಸಲ್ಲಿಕೆ

ಕುಂದಾಪುರ : (Kundapur Assembly Constituency) ರಾಜ್ಯದಾದ್ಯಂತ ಚುನಾವಣೆ ರಂಗೆರುತ್ತಿದ್ದು, ಟಿಕೆಟ್‌ ಹಂಚಿಕೆ ಕಾವು ಕೂಡ ಏರಿದೆ. ಕಾಂಗ್ರೆಸ್‌ ಎರಡು ಪಟ್ಟಿಯನ್ನು ರಿಲೀಸ್‌ ಮಾಡಿದರೆ, ಜೆಡಿಎಸ್‌ ಒಂದು ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಬಿಜೆಪಿ ಲೇಟೆಸ್ಟ್‌ ಆಗಿ ಒಂದೇ ವಾರದಲ್ಲೇ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದೀಗ ಕುಂದಾಪುರ ವಿಧಾನಸಭೆ ಕ್ಷೇತ್ರದಲ್ಲಿ ಕಿರಣ್‌ ಕೊಡ್ಗಿ ಅವರ ಎದುರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ದಿನೇಶ್‌ ಹೆಗ್ಡೆ ಮೊಳಹಳ್ಳಿ ಸ್ಪರ್ಧಿಸುತ್ತಿದ್ದು, ಇಂದು ಸಹಾಯಕ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.

ಇಂದು ಬೆಳಿಗ್ಗೆ ಕುಂದಾಪುರ ಶಾಸ್ತ್ರಿ ಸರ್ಕಲ್‌ ನ ಪೊಲೀಸ್‌ ಚೌಕಿ ಬಳಿ ಸಾರ್ವಜನಿಕ ಸಭೆ ನಡೆಸಿದ್ದು ಬಳಿಕ ಸಹಾಯಕ ಕಮಿಷನರ್‌ ರವರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನೂ ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ಕಾಪು, ಉಡುಪಿ, ಕುಂದಾಪುರ ಹಾಗೂ ಬೈಂದೂರು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಫೈನಲ್‌ ಮಾಡಿದ್ದು, ಅಭ್ಯರ್ಥಿಗಳ ಪ್ರಚಾರ ಕಾರ್ಯ ಚುರುಕಾಗಿಯೇ ನಡೆಯುತ್ತಿದೆ. ಮಠ, ದೇವಾಲಯ ಅಂತ ಭೇಟಿ ನೀಡಿ ಪ್ರಚಾರ ನಡೆಸುತ್ತಿದ್ದು, ಸಾಮಾಜಿಕ ಜಾಲತಾಣದಲ್ಲೂ ಕೂಡ ಕಾಂಗ್ರೆಸ್‌ ಪ್ರಚಾರ ಕಾರ್ಯ ಭರದಿಂದಲೇ ಸಾಗುತ್ತಿದೆ. ಇಂದು ಕುಂದಾಪುರದಲ್ಲೂ ಸಮಾವೇಶ ನಡೆಸಿದ್ದು, ಬಳಿಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಕುಂದಾಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ದಿನೇಶ್‌ ಹೆಗ್ಡೆ ಮೊಳಹಳ್ಳಿ ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಪ್ರತಿ ಬೂತ್‌ ಮಟ್ಟದಲ್ಲೂ ಕಾರ್ಯಕರ್ತರು ಮತದಾರರನ್ನು ಸಂಪರ್ಕಿಸಿ ಪಕ್ಷದ ಗ್ಯಾರಂಟಿ ಕಾರ್ಡ್‌ ಗಳನ್ನು ವಿತರಿಸಿ ಕಾಂಗ್ರೆಸ್‌ ಸರಕಾರದ ಅವಧಿಯ ಜನಪ್ರಿಯ ಯೋಜನೆಗಳನ್ನು ತಿಳಿಸುತ್ತಿದ್ದಾರೆ. ಇದಲ್ಲದೇ ಕುಂದಾಪುರ ಕ್ಷೇತ್ರ ವ್ಯಾಪ್ತಿಯ ಹಂಗಳೂರು, ಕೋಟ, ಮಂದಾರ್ತಿಯಲ್ಲಿ ಈಗಾಗಲೇ ಬೃಹತ್‌ ಮಹಿಳಾ ಸಮಾವೇಶಗಳನ್ನು ಸಂಘಟಿಸಲಾಗಿದೆ.

ಇದನ್ನೂ ಓದಿ : ಕುಂದಾಪುರ ವಿಧಾನಸಭೆ ಕ್ಷೇತ್ರ : ಇಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕಿರಣ್ ಕೊಡ್ಗಿ

ಇದನ್ನೂ ಓದಿ : Covid RT-PCR test : ಹೆಚ್ಚಿದ ಕೊರೊನಾ ಆತಂಕ : ರಾಜ್ಯ ಆರೋಗ್ಯ ಇಲಾಖೆಯಿಂದ ಮಹತ್ವದ ಪ್ರಕಟಣೆ

ಇದನ್ನೂ ಓದಿ : ಆರೋಗ್ಯ ಸಂಸ್ಥೆಗಳಲ್ಲಿನ ಎಲ್ಲಾ ಮರಣಗಳಿಗೆ ಮರಣ ಕಾರಣ ಸಂಗ್ರಹಕ್ಕೆ ಸೂಚನೆ : ಆರೋಗ್ಯ ಇಲಾಖೆ

Kundapur Assembly Constituency: Kundapur Assembly Constituency Congress Candidate Dinesh Hegde Molahalli Nomination Submission

Comments are closed.