Kundapura bike accident: ಕುಂದಾಪುರ : ಬೈಕ್ ಢಿಕ್ಕಿ ಪಾದಚಾರಿ ಸಾವು

ಕುಂದಾಪುರ: (Kundapura bike accident) ಅತೀ ವೇಗ ಹಾಗೂ ನಿರ್ಲಕ್ಷ್ಯತನದಿಂದ ಬೈಕ್‌ ಚಲಾಯಿಸಿಕೊಂಡು ಬಂದ ಬೈಕ್‌ ಸವಾರ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಢಿಕ್ಕಿ ಹೊಡೆದಿದ್ದಾನೆ. ಪರಿಣಾಮ ಪಾದಚಾರಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು, ಪಾದಚಾರಿ ಸಾವನ್ನಪ್ಪಿದ್ದಾರೆ. ಚಂದ್ರಕುಮಾರ್‌ ಎನ್ನುವವರು ಮೃತ ವ್ಯಕ್ತಿ.

ಕುಂದಾಪುರದ ಕೋಣಿ ಗ್ರಾಮದ ಕಟ್ಕೆರಿಯಲ್ಲಿ ಅಪಘಾತ (Kundapura bike accident) ಸಂಭವಿಸಿದೆ. ಬೈಕ್‌ ಸವಾರ ಪ್ರದೀಪ್‌ ಕೊಟೇಶ್ವರ ಕಡೆಯಿಂದ ಹಾಲಾಡಿಗೆ ಬೈಕ್‌ ನಲ್ಲಿ ಅಜಾಗರೂಕತೆಯಿಂದ ಪ್ರಯಾಣಿಸುತ್ತಿದ್ದು, ಕೋಣಿ ಸಮೀಪ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಚಂದ್ರಕುಮಾರ್ ಗೆ ಢಿಕ್ಕಿ ಹೊಡೆದಿದ್ದಾರೆ. ಪರಿಣಾಮ ಚಂದ್ರಕುಮಾರ್‌ ತಲೆಗೆ ತೀವ್ರ ಪೆಟ್ಟಾಗಿದ್ದು, ಅಧಿಕ ರಕ್ತಸ್ರಾವವಾಗಿದೆ. ಗಂಭೀರವಾದ ಗಾಯಗಳಾಗಿದ್ದಲ್ಲದೇ ದೇಹದ ಒಳಗೂ ಕೂಡ ಪೆಟ್ಟು ಬಿದ್ದಿರುವುದಾಗಿ ತಿಳಿದುಬಂದಿದೆ. ಅಲ್ಲದೇ ಆರೋಪಿ ಪ್ರದೀಪ್‌ ಗೂ ಕೂಡ ತಲೆಗೆ ಹೊಟ್ಟೆಗೆ ಪೆಟ್ಟಾಗಿದ್ದು, ಇವರಿಗೂ ಕೂಡ ತೀವ್ರ ರಕ್ತಸ್ರಾವವಾಗಿದೆ. ಇಬ್ಬರನ್ನು ಕೂಡ ಕೊಟೇಶ್ವರ ಎನ್‌ ಆರ್‌ ಆಚಾರ್ಯ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ.

ಅಲ್ಲಿ ಇಬ್ಬರಿಗೂ ಪ್ರಥಮ ಚಿಕಿತ್ಸೆ ನೀಡಿದ್ದು, ಇಬ್ಬರಿಗೂ ತೀವ್ರವಾಗಿ ಪೆಟ್ಟಾಗಿ ಅಧಿಕ ರಕ್ತಸ್ರಾವವಾದ ಪರಿಣಾಮ ಹೆಚ್ಚಿನ ಚಿಕಿತ್ಸೆಗೆ ಇಬ್ಬರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸಾಗಿಸಲಾಗುತ್ತದೆ. ಆದರೆ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ್ದ ವೈದ್ಯರು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ತಲೆಗೆ ತೀವ್ರ ಪೆಟ್ಟಾಗಿದ್ದ ಚಂದ್ರಕುಮಾರ್‌ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಇನ್ನೂ ಆರೋಪಿ ಪ್ರದೀಪ್‌ ಮಣಿಪಾಲ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಮೃತ ಚಂದ್ರಕುಮಾರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ ನಂತರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.

ಇದನ್ನೂ ಓದಿ : Jharkhand crime case: ಅಕ್ರಮ ಸಂಬಂಧ: ಪತ್ನಿಯ ಪ್ರಿಯಕರನ ತಲೆ ಕಡಿದ ಪತಿ

ಇದನ್ನೂ ಓದಿ : Rajghat Car accident: ಕರ್ತವ್ಯದಲ್ಲಿದ್ದ ಪೊಲೀಸ್ ಸಬ್-ಇನ್‌ಸ್ಪೆಕ್ಟರ್ ಗೆ ಕಾರು ಢಿಕ್ಕಿ: ಆರೋಪಿ ಅರೆಸ್ಟ್

ಇದನ್ನೂ ಓದಿ : Development fee is mandatory: ಮಂಗಳೂರು ವಿಮಾನ ನಿಲ್ಡಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚುವರಿ ಹೊರೆ : ಅಭಿವೃದ್ಧಿ ಶುಲ್ಕ ಕಡ್ಡಾಯ

ಸದ್ಯ ಪ್ರಕರಣದ ಕುರಿತು ಕುಂದಾಪುರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

Kundapura bike accident: Kundapura: Pedestrian killed in bike collision

Comments are closed.