Kundapura News : ಕುಂದಾಪುರ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

Published by
Kannada News Next Desk

ಕುಂದಾಪುರ : (Kundapura News) ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಕುಂದಾಪುರದ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ನಜೀರ್‌ ಎಂಬಾತ ನಿನ್ನೆ ಕುಂದಾಪುರ ತಾಲೂಕಿನ ವಕ್ವಾಡಿಯಲ್ಲಿರುವ ಬಿಜಾಡಿ – ವಕ್ವಾಡಿ ರಸ್ತೆಯಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯದಿಂದ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಹಿಂದಿನಿಂದ ಬಂದು ಅಸಭ್ಯವಾಗಿ ವರ್ತಿಸಿದ್ದ. ಈ ವೇಳೆಯಲ್ಲಿ ವಿದ್ಯಾರ್ಥಿನಿ ಕೂಗಿಕೊಂಡಿದ್ದು, ಸ್ಥಳೀಯರು ಆರೋಪಿಯನ್ನು ಹಿಡಿದು ಕುಂದಾಪುರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದರು.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಕುಂದಾಪುರ ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವಿಧಿಸಿ ಆದೇಶಿಸಿದೆ.

ಇದನ್ನೂ ಓದಿ : ಕುಂದಾಪುರ : ಕಾಲೇಜಿಗೆ ತೆರಳುತ್ತಿದ್ದ ವೇಳೆ ಅಸಭ್ಯ ವರ್ತನೆ : ಯುವಕನಿಗೆ ಚಪ್ಪಲಿ ಏಟು ಕೊಟ್ಟ ವಿದ್ಯಾರ್ಥಿನಿ

ಕಳೆದ ವರ್ಷವಷ್ಟೇ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲ್‌ ಅನ್ನು ಉದ್ಘಾಟಿಸಲಾಗಿತ್ತು. ಆದರೆ ಈ ಭಾಗದಲ್ಲಿ ಹಾಸ್ಟೆಲ್‌ ಇರುವುದು ವಿದ್ಯಾರ್ಥಿನಿಯರಿಗೆ ಸೇಪ್‌ ಅಲ್ಲಾ ಅನ್ನೋ ಮಾತುಗಳು ಕೇಳಿಬಂದಿದೆ. ಸದ್ಯ ವಿದ್ಯಾರ್ಥಿನಿ ಆರೋಪಿಗೆ ಚಪ್ಪಲಿಯೇಟು ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Kundapura News : Kundapura Student slapped Rude behavior accused 14 days judicial custody

This post was last modified on ಜೂನ್ 10, 2023 9:48 ಫೂರ್ವಾಹ್ನ

Share