Mangalore car accident case: ಮಂಗಳೂರು ಕಾರು ಅಪಘಾತ ಪ್ರಕರಣ: ತುಳು ಸ್ಟ್ಯಾಂಡ್‌ ಅಪ್‌ ಕಾಮಿಡಿಯನ್‌ ಅರೆಸ್ಟ್‌

ಮುಲ್ಕಿ: (Mangalore car accident case) ಪಡುಪಣಂಬೂರು ಪೆಟ್ರೋಲ್‌ ಬಂಕ್‌ ಬಳಿ ಮಂಗಳವಾರ ಮಧ್ಯರಾತ್ರಿ ನಡೆದ ಕಾರು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಟ್ರಾಫಿಕ್‌ ಪೊಲೀಸರು ಕಾರು ಸಮೇತ ಚಾಲಕನನ್ನು ಬಂಧಿಸಿದ್ದಾರೆ.

ಆರೋಪಿ ಕಾರು ಚಾಲಕನನ್ನು ಹಳೆಯಂಗಡಿ ಇಂದ್ರನಗರದ ನಿವಾಸಿ ಅರ್ಪಿತ್‌ ಎಂದು ಗುರುತಿಸಲಾಗಿದ್ದು, ಈತನನ್ನು ತುಳು ಸ್ಟ್ಯಾಂಡ್‌ ಅಪ್‌ ಕಾಮಿಡಿ ಯೂಟ್ಯೂಬರ್‌ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಕಾರನ್ನು ಚಲಾಯಿಸಿ ಟಯರ್‌ ದುರಸ್ತಿ ಮಾಡುತ್ತಿದ್ದ ಮೂವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದರು. ಇದೀಗ ಘಟನೆಗೆ ಸಂಬಂಧಿಸಿದ ಆರೋಪಿಯನ್ನು ತುಳುವಿನ ಸ್ಟ್ಯಾಂಡ್‌ ಅಪ್‌ ಕಾಮಿಡಿಯನ್‌ ಅರ್ಪಿತ್‌ ಎನ್ನುವವರನ್ನು ಬಂಧಿಸಲಾಗಿದೆ.

ಮಧ್ಯಪ್ರದೇಶದ ಇನದೋರ್‌ ನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಪಡುಪಣಂಬೂರು ಬಳಿ ಟಯರ್‌ ಪಂಕ್ಚರ್‌ ಆಗಿದ್ದು, ಲಾರಿಯಲ್ಲಿದ್ದ ಮಧ್ಯಪ್ರದೇಶದ ನಿವಾಸಿಗಳಾದ ಬಬುಲು, ಅಚಲ್‌ ಸಿಂಗ್‌ ಹಾಗೂ ಕೇರಳ ನಿವಾಸಿ ಅನೀಶ್‌ ಎನ್ನುವವರು ಕೆಳಗಿಳಿದು ಹೆದ್ದಾರಿ ಬದಿಯಲ್ಲಿ ಟಯರ್‌ ತೆಗೆದು ದುರಸ್ತಿ ಮಾಡುತ್ತಿದ್ದರು. ಈ ವೇಳೆ ಅತೀ ವೇಗದಿಂದ ಬಂದ ಕಾರೊಂದು ಢಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ : Mangaluru Fire Breaks : ಜಪ್ಪಿನಮೊಗರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ : ಸುಟ್ಟುಕರಕಲಾಯ್ತು ಬಸ್‌

3 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳು ಅರೆಸ್ಟ್‌

ನವದೆಹಲಿ: ಮೂರು ವರ್ಷದ ಬಾಲಕಿಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ದೆಹಲಿಯ ಫತೇಪುರ್ ಬೆರಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಇದೀಗ ಘಟನೆಯ ಕುರಿತು ಆರೋಪಿಗಳ ವಿರುದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ದೂರು ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ : Mangalore Murder : ಹಾಡಹಗಲೇ ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿಯನ್ನು ಚೂರಿ ಇರಿದು ಬರ್ಬರ ಹತ್ಯೆ

ಇದನ್ನೂ ಓದಿ : Bike tanker accident: ಬೈಕ್‌ ಟ್ಯಾಂಕರ್‌ ಅಪಘಾತ: ಬೈಕ್‌ ಸವಾರ ಸ್ಥಳದಲ್ಲೇ ಸಾವು

Mangalore car accident case: Mangalore car accident case: Tulu stand-up comedian arrested

Comments are closed.