ಕೊಲ್ಲೂರಿನಲ್ಲಿ ಪುದುಚೇರಿ ಮುಖ್ಯಮಂತ್ರಿಯಿಂದ ಚಂಡಿಕಾ ಹೋಮ

0

ಕೊಲ್ಲೂರು : ಪುದುಚೇರಿಯ ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕೊಲ್ಲೂರಿಗೆ ಆಗಮಿಸಿದ ಅವರು, ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ. ನಂತರ ದೇವಸ್ಥಾನದಲ್ಲಿ ನಡೆದ ಚಂಡಿಕಾ ಹೋಮದಲ್ಲಿ ಭಾಗಿಯಾಗಿದ್ದಾರೆ.

ಈ ವೇಳೆಯಲ್ಲಿ ಪುದುಚೇರಿಯ ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿಯ ಟ್ರಸ್ಟಿಗಳು ಗೌರವ ಸಲ್ಲಿಸಿದ್ದಾರೆ.

Leave A Reply

Your email address will not be published.