ಕುಂದಾಪುರದಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ರವಾನೆ : ಖಾಸಗಿ ಕಾಲೇಜು PRO ವಿರುದ್ದ ಸಿಡಿದೆದ್ದ ವಿದ್ಯಾರ್ಥಿಗಳು

ಕುಂದಾಪುರ : ವಿದ್ಯಾರ್ಥಿನಿಯರಿಗೆ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ (PRO ) ರಾತ್ರಿಯ ವೇಳೆಯಲ್ಲಿ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕುಂದಾಪುರದಲ್ಲಿ ಖಾಸಗಿ ಕಾಲೇಜಿನ (Students protest )ವಿದ್ಯಾರ್ಥಿಗಳು ಇಂದು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್‌ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಕುಂದಾಪುರ ನಗರದ ಸಂಗಮ್‌ ಬಳಿಯಲ್ಲಿರುವ ಖಾಸಗಿ ಕಾಲೇಜಿನ ಪಿಆರ್‌ಓ ರಾತ್ರಿಯ ವೇಳೆಯಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿರುವ ಆರೋಪ ಕೇಳಿಬಂದಿದೆ. ಕಳೆದ ಡಿಸೆಂಬರ್‌ ತಿಂಗಳಿನಿಂದಲೂ ಈ ರೀತಿಯಲ್ಲಿ ಸಂದೇಶಗಳು ಬರುತ್ತಿದ್ದು, ಕಿರುಕುಳ ತಾಳಲಾರದೆ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಬಿಸಿಲಿನಲ್ಲಿ ಕುಳಿತು ಧರಣಿ ನಡೆಸಿದ್ದಾರೆ.

ಬೈಂದೂರು ಶಾಸಕ ಸುಕುಮಾರ್‌ ಶೆಟ್ಟಿ ಹಾಗೂ ಪಿಆರ್‌ಓ ನಾಗರಾಜ್‌ ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ. ಈ ವೇಳೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರು ವಿದ್ಯಾರ್ಥಿಗಳ ಮನವೊಲಿಕೆಗೆ ಮುಂದಾಗಿದ್ದರೂ ಕೂಡ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಇನ್ನು ಕಾಲೇಜಿನ ಆಡಳಿತ ಮಂಡಳಿತ ಸದಸ್ಯರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಅಹವಾಲು ಆಲಿಸಿದ್ದಾರೆ. ಅಂತಿಮವಾಗಿ ಪಿಆರ್‌ ಓ ವಿರುದ್ದ ಕ್ರಮಕೈಗೊಳ್ಳುವಂತೆ ಕಾಲೇಜು ಪ್ರಾಂಶುಪಾಲರಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಮನವಿ ಸ್ವೀಕರಿಸಿದ ಪ್ರಾಂಶುಪಾಲರು ಶಿಸ್ತುಕ್ರಮಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ.

ಇದನ್ನೂ ಓದಿ :  ಪ್ರೌಢ, ಪ್ರಾಥಮಿಕ ಶಾಲೆಗಳಿಗೆ ಎಪ್ರಿಲ್‌ 10 ರಿಂದ ಬೇಸಿಗೆ ರಜೆ : ಮೇ 16 ಶಾಲಾರಂಭ

ಇದನ್ನೂ ಓದಿ : ಮಗನನ್ನು ಕಳೆದುಕೊಂಡ ನೋವಲ್ಲೂ ಗಾಯಾಳುಗಳಿಗೆ ಆರ್ಥಿಕ ನೆರವು ನೀಡಿದ ಹರ್ಷ ಕುಟುಂಬ

ಇದನ್ನೂ ಓದಿ : ಪರೀಕ್ಷೆ ಗೈರಾದ್ರೆ ಮರು ಪರೀಕ್ಷೆಯಿಲ್ಲ; ಅಂತಿಮ ಪರೀಕ್ಷೆಗೂ ಹಿಜಾಬ್‌ ಧರಿಸಲು ಅವಕಾಶವಿಲ್ಲ : ಸಚಿವ ಬಿ.ಸಿ.ನಾಗೇಶ್‌

(Students protest against private college PRO in Kundapura)

Comments are closed.