ಫರಂಗಿಪೇಟೆ ಸ್ಟುಡಿಯೋ ಮಾಲೀಕನ ಹತ್ಯೆ ಯತ್ನ : ಮೂವರು ಆರೋಪಿಗಳ ಬಂಧನ

ಬಂಟ್ವಾಳ : ಫರಂಗಿಪೇಟೆಯಲ್ಲಿ ಸ್ಟುಡಿಯೋ ಮಾಲೀಕನ ಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಮತ್ತೋರ್ವ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಬಂಟ್ವಾಳ ಸಮೀಪದ ಫರಂಗಿಪೇಟೆಯಲ್ಲಿ ಬುಧವಾರ ರಾತ್ರಿ 7.45ರ ಸುಮಾರಿಗೆ ಪುದು ಗ್ರಾಮದ ಕೊಟ್ಟಿಂಜ ನಿವಾಸಿಯಾಗಿರುವ ದಿನೇಶ್ ಶೆಟ್ಟಿ ಅವರು ಸ್ಟುಡಿಯೋದಲ್ಲಿದ್ದ ವೇಳೆಯಲ್ಲಿ ನುಗ್ಗಿದ್ದ ದುಷ್ಕರ್ಮಿಗಳ ತಂಡ ಏಕಾಏಕಿ ತಲವಾರನಿಂದ ಹಲ್ಲೆ ನಡೆದಿದೆ.

ಘಟನೆಯಿಂದಾಗಿ ದಿನೇಶ್ ಶೆಟ್ಟಿ ಅವರ ಹೊಟ್ಟೆ ಹಾಗೂ ತಲೆಯ ಭಾಗಕ್ಕೆ ಗಂಭೀರವಾಗಿ ಗಾಯ ವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಆರೋಪಿಗಳಾದ ಅಮ್ಮೆಮ್ಮಾರು ನಿವಾಸಿ ಮಹಮ್ಮದ್ ಅರ್ಷದ್ ( 19 ವರ್ಷ), ರೆಹಮಾನ್ ( 22ವರ್ಷ), ಮಹಮ್ಮದ್ ಸೈಪುದ್ದೀನ್ (22 ವರ್ಷ) ಎಂಬವರನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಸವಾದ್ ನಾಪತ್ತೆಯಾಗಿದ್ದಾನೆ.

ಈ ಹಿಂದೆ ಕುಂಪನಮಜಲು ಎಂಬಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರಾಗಿರುವ ದಿನೇಶ್ ಶೆಟ್ಟಿ ಪ್ರಕರಣದ ಕುರಿತು ಹೋರಾಟವನ್ನು ನಡೆಸಿದ್ದರು. ಇದೇ ಕಾರಣದಿಂದಲೇ ಈ ಕೃತ್ಯವನ್ನೆಸಲಾಗಿದೆ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Comments are closed.