Udupi : ಜ್ಯುವೆಲ್ಲರಿ ಶಾಪ್ ಮಾಲೀಕರ ಮಗ ಆತ್ಮಹತ್ಯೆ : ಬ್ರಹ್ಮಾವರದಲ್ಲಿ ಶಿಕ್ಷಕ ದಂಪತಿಗೆ ಮಗನಿಂದ ಜೀವ ಬೆದರಿಕೆ

ಉಡುಪಿ : ಜ್ಯುವೆಲ್ಲರಿ ಶಾಪ್‌ ಮಾಲೀಕರೋರ್ವರ ಪುತ್ರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ (Udupi) ನಡೆದಿದೆ. ಮಹೇಶ್‌ ಭಟ್‌ (24 ವರ್ಷ ) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಉಡುಪಿಯ ವಾದಿರಾಜ ರಸ್ತೆಯ ಭೂತದ ಓಣಿಯ ಮನೆಯಲ್ಲಿ ವಾಸವಾಗಿದ್ದ ಮಹೇಶ್‌ ಭಟ್‌ ನೇಣುಬಿಗಿದು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ. ಹಲವು ಸಮಯದಿಂದಲೂ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ತಂದೆ ತಾಯಿಗೆ ಜೀವ ಬೆದರಿಕೆ : ಬ್ರಹ್ಮಾವರ ಠಾಣೆಗೆ ದೂರು

ಬ್ರಹ್ಮಾವರ : ತಂದೆ ತಾಯಿಗೆ ಮಗನೇ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಒಡ್ಡಿರುವ ಕುರಿತು ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ರಹ್ಮಾವರ ಸಮೀಪದ ಹಂದಾಡಿಯ ನಿವಾಸಿ ಜಯರಾಮ ಶೆಟ್ಟಿ ಹಾಗೂ ಪೂರ್ಣಿಮಾ ಶೆಟ್ಟಿ ಎಂಬವರೇ ಮಗನ ವಿರುದ್ದ ದೂರು ನೀಡಿದವರು. ಮಗ ರಜತ್‌ ಶೆಟ್ಟಿ ವಿರುದ್ದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ತಂಗಿ ಮದುವೆಯಲ್ಲಿ ಅಣ್ಣಂದಿರ ಭರ್ಜರಿ ಡ್ಯಾನ್ಸ್‌ : ವೈರಲ್‌ ಆಯ್ತು ಉಡುಪಿಯ ಮದುವೆ ವಿಡಿಯೋ

ಶಿಕ್ಷಕ ದಂಪತಿಗಳು ಕೆಲಸ ಮುಗಿಸಿ ಮನೆಗೆ ಬಂದಿದ್ದ ವೇಳೆಯಲ್ಲಿ ಮಗ ರಜತ್‌ ಶೆಟ್ಟಿ ಏಕಾಏಕಿ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ. ನಂತರ ತಾಯಿಯ ಕರಿಮಣಿ ಸರವನ್ನು ಹಿಡಿದೆಳೆದು ತುಂಡು ಮಾಡಿದ್ದಾನೆ. ಇದನ್ನು ಪ್ರಶ್ನಿಸಿದ ತಂದೆ ಜಯರಾಮ ಶೆಟ್ಟಿ ಅವರಿಗೆ ಕತ್ತಿಯನ್ನು ತೋರಿಸಿ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮಗನ ವಿರುದ್ದ ಕಠಿಣ ಕ್ರಮಕೈಗೊಳ್ಳುವಂತೆ ದೂರು ನೀಡಲಾಗಿದೆ. ಬ್ರಹ್ಮಾವರ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ : ಮಂಗಳೂರಲ್ಲಿ ಬೈಕ್‌ ಪೆಟ್ರೋಲ್‌ ಟ್ಯಾಂಕ್‌ ಸ್ಪೋಟ : ಚಲಿಸುತ್ತಿದ್ದ ಖಾಸಗಿ ಬಸ್‌ ಗೆ ಬೆಂಕಿ

ಇದನ್ನೂ ಓದಿ :  16 ವರ್ಷದ ಬಾಲಕಿ ಮೇಲೆ 8 ಮಂದಿಯಿಂದ ಗ್ಯಾಂಗ್​ ರೇಪ್​​: ಆರೋಪಿಗಳ ಬಂಧನ

Teacher couple threat in Brahamavar, Udupi jewelry shop owner son Suicide

Comments are closed.