ಭಾನುವಾರ, ಏಪ್ರಿಲ್ 27, 2025
HomeCoastal News10 Years Sentence : ಬೈಂದೂರು ಅಪ್ರಾಪ್ತ ನಾದಿನಿ ಅತ್ಯಾಚಾರ ಪ್ರಕರಣ : 10 ವರ್ಷ...

10 Years Sentence : ಬೈಂದೂರು ಅಪ್ರಾಪ್ತ ನಾದಿನಿ ಅತ್ಯಾಚಾರ ಪ್ರಕರಣ : 10 ವರ್ಷ ಶಿಕ್ಷೆ, 20 ಸಾವಿರ ದಂಡ

- Advertisement -

ಕುಂದಾಪುರ : ಬೈಂದೂರಿನಲ್ಲಿ ನಡೆದಿದ್ದ ಹೆಂಡತಿಯ ತಂಗಿಯ (ನಾದಿನಿ) ಮೇಲೆ ಅತ್ಯಾಚಾರಗೈದ ( Byndoor Rape case )ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿ ಮೇಲಿನ ಆಪಾದನೆಗಳು ರುಜುವಾತಾಗಿದೆ. ಅಲ್ಲದೇ ಆತ ಅಪರಾಧಿ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ಡಿಸೆಂಬರ್‌ 9ರಂದು ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ಅಪರಾಧಿಗೆ 10 ವರ್ಷ ಸಜೆ, 20 ಸಾವಿರ ದಂಡ ವಿಧಿಸಿದ್ದು (10 Years Sentence) ದಂಡ ತೆರಲು ತಪ್ಪಿದಲ್ಲಿ 1 ವರ್ಷ ಸಾದಾ ಸಜೆ‌ ವಿಧಿಸಿ ಆದೇಶಿಸಲಾಗಿದೆ.

ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2018ರಲ್ಲಿ ಈ ಘಟನೆ ನಡೆದಿತ್ತು. ಸುರೇಶ್ ಮರಾಠಿ ( 29 ವರ್ಷ ) ಎಂಬಾತನೇ ಅಪರಾಧಿಯಾಗಿದ್ದು ಈತ ತನ್ನ ಹೆಂಡತಿ ತಂಗಿಯನ್ನು ಕಾಡಿಗೆ ಕರೆದೊಯ್ದು ಅಲ್ಲಿನ ಮರವೊಂದರ ಮೇಲೆ ಗುಡಿಸಲು ಸಿದ್ದಪಡಿಸಿ ನಿರಂತರವಾಗಿ ಮೂರು‌ ದಿನಗಳ ಕಾಲ ಆಕೆ ಮೇಲೆ ಅತ್ಯಾಚಾರ ನಡೆಸಿದ್ದ. 17 ವರ್ಷ ಪ್ರಾಯದ ಸಂತ್ರಸ್ತ ಯುವತಿ ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಅಪರಾಧಿಗೆ 10 ವರ್ಷ ಸಜೆ, 20 ಸಾವಿರ ದಂಡ ವಿಧಿಸಿದ್ದು ದಂಡ ತೆರಲು ತಪ್ಪಿದಲ್ಲಿ 1 ವರ್ಷ ಸಾದಾ ಸಜೆ‌ ವಿಧಿಸಿ ಆದೇಶಿಸಲಾಗಿದೆ.

ಪೊಲೀಸರಿಂದ ತಪ್ಪಿಸಿಕೊಂಡಿದ್ದ ಖತರ್ನಾಕ್ ಆಸಾಮಿ

ಆರೋಪಿ ಸುರೇಶ್ ಮರಾಠಿಯನ್ನು ಬಂಧಿಸಿದ ಬಳಿಕ ವಿಚಾರಣೆಗಾಗಿ‌ 2018ನೇ ಇಸವಿಯ ಅಕ್ಟೋಬರ್ ತಿಂಗಳಿನಲ್ಲಿ ಉಡುಪಿ ಫೋಕ್ಸೋ ನ್ಯಾಯಾಲಯಕ್ಕೆ ಕರೆತಂದು ರೈಲಿನಲ್ಲಿ ಮರಳಿ ಕಾರಾವರ ಜೈಲಿಗೆ ಕರೆದೊಯ್ಯುತ್ತಿರುವಾಗ ಬೈಂದೂರು ರೈಲು ನಿಲ್ದಾಣದ ಬಳಿ ಆರೋಪಿ ತನಗೆ ವಾಂತಿ ಬರುತ್ತಿದೆಯೆಂಬ ನಾಟಕವಾಡಿ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪದಡಿಯಲ್ಲಿ ಇಬ್ಬರು ಪೊಲೀಸರನ್ನು ಅಂದಿನ ಉಡುಪಿ ಎಸ್ಪಿ ಲಕ್ಷ್ಮಣ ನಿಂಬರ್ಗಿ ಅಮಾನತುಗೊಳಿಸಿದ್ದರು. ಅಂದಾಜು ಎರಡು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆತ ಕಳೆದ ಆರೇಳು ತಿಂಗಳ ಹಿಂದೆ ನ್ಯಾಯಾಲಯಕ್ಕೆ ಶರಣಾಗತನಾಗಿದ್ದ.

ಅಭಿಯೋಜನೆ ವಿರುದ್ಧವಿತ್ತು ಪ್ರಮುಖ ಸಾಕ್ಷಿಗಳು

ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರಿನ ಅಂದಿನ ಸಿಪಿಐ ಪರಮೇಶ್ವರ ಗುನಗ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಒಟ್ಟು 25 ಸಾಕ್ಷಿಗಳ ಪೈಕಿ ನ್ಯಾಯಾಲಯದಲ್ಲಿ 15 ಮಂದಿ ವಿಚಾರಣೆ ನಡೆದಿತ್ತು. ಸಂತ್ರಸ್ತ ಯುವತಿ ಸಹಿತ ಪ್ರಮುಖ ಸಾಕ್ಷಿಗಳು‌ ಅಭಿಯೋಜನೆಗೆ ವಿರುದ್ಧವಾಗಿತ್ತು. ಆದರೆ‌ ವೈದ್ಯಕೀಯ ಸಾಕ್ಷಿ, ತನಿಖಾಧಿಕಾರಿ‌ ನ್ಯಾಯಾಲಯದಲ್ಲಿ ನುಡಿದ ಸಾಕ್ಷಿ ಹಾಗೂ ಸಾಂದರ್ಭಿಕ ಸಾಕ್ಷಿ ಆಧಾರದಲ್ಲಿ ಸುರೇಶ್ ಮರಾಠಿ ಅಪರಾಧಿ ಎಂದು ನ್ಯಾಯಾಧೀಶರು ತೀರ್ಪು‌ ಪ್ರಕಟಿಸಿದ್ದು ವಿಚಾರಣಾಧೀನ ಕೈದಿಯಾಗಿದ್ದಾಗ ಆರೋಪಿ ಪರಾರಿಯಾಗಿದ್ದು ಪ್ರಮುಖ ಸಾಕ್ಷಿಗಳ ಮೇಲೆ ಪ್ರಭಾವ ಬೀರಿರುವ ಸಾಧ್ಯತೆಯಿದ್ದು ಅದರಿಂದಲೇ‌ ಪ್ರಮುಖ ಸಾಕ್ಷಿದಾರರು‌ ಪ್ರಾಸಿಕ್ಯೂಶನ್ ವಿರುದ್ಧ ಸಾಕ್ಷಿ ನುಡಿದಿರಬಹುದೆಂದು ಕೂಡ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.

ಇದನ್ನೂ ಓದಿ : 4 Members Suicide : ಮಂಗಳೂರಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಇದನ್ನೂ ಓದಿ : omicron alert : ಉಡುಪಿಯಲ್ಲಿ ಓಮಿಕ್ರಾನ್ ಕಟ್ಟೆಚ್ಚರ : ಕೊರೊನಾ ಟೆಸ್ಟ್‌ ಹೆಚ್ಚಳಕ್ಕೆ ಡಿಸಿ ಕೂರ್ಮರಾವ್‌ ಸೂಚನೆ

(10 Years Sentence for Rape accused Byndoor Rape case)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular