ಬ್ರಹ್ಮಾವರ : ದೇವಸ್ಥಾನದ ಆಡಳಿತದ ಮೊಕ್ತೇಸರ ಆತ್ಮಹತ್ಯೆ

ಬ್ರಹ್ಮಾವರ: ಆರೂರು ವಿಷ್ಣುಮೂರ್ತಿ ದೇವಸ್ಥಾನದ ಆಡಳಿತದ ಮೊಕ್ತೇಸರರು ನೇಣು ಬಿಗಿದು‌ ಆತ್ಮಹತ್ಯೆ ಮಾಡಿಕೊಂಡ ಘಟನೆ ‌ಉಡುಪಿ ಜಿಲ್ಲೆಯ ಹಾವಂಜೆಯ ದೊಂಪದ ಕುಮೇರಿ ಎಂಬಲ್ಲಿ ನಡೆದಿದೆ.

ಡಾ.ಎಂ.ರಾಘವೇಂದ್ರ ರಾವ್‌ ಹಾವಂಜೆ ( 76 ವರ್ಷ ) ಎಂಬವರೇ ಆತ್ಮಹತ್ಯೆ ಮಾಡಿಕೊಂಡಿರುವ ದೇವಸ್ಥಾನದ ಆಡಳಿತ ಮೊಕ್ತೇಸರರು. ಕಳೆದೊಂದು ತಿಂಗಳ ಹಿಂದೆಯಷ್ಟೇ ಪತ್ನಿ ಸಾವನ್ನಪ್ಪಿದ್ದರು. ಹೆಣ್ಣು ಮಕ್ಕಳು ಮಂಗಳೂರಿನಲ್ಲಿ ವಾಸವಾಗಿದ್ದರು. ಹೀಗಾಗಿ ಡಾ. ಎಂ.ರಾಘವೇಂದ್ರ ರಾವ್‌ ಅವರು ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಅಲ್ಲದೇ ರಾಘವೇಂದ್ರ ರಾವ್‌ ಅವರು ರಕ್ತದೊತ್ತಡ, ಮಧುಮೇಹ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಮಕ್ಕಳು ವಾರಕೊಮ್ಮೆ ಮನೆಗೆ ಬಂದು ಆರೋಗ್ಯ ವಿಚಾರಿಸಿಕೊಂಡು ಹೋಗುತ್ತಿದ್ದರು.ಇದೀಗ ಮನೆಯ ಕೋಣೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಉಡುಪಿ : ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಶಿಕ್ಷಕಿ ಉಷಾ ಸಾವು : ಆಸ್ಪತ್ರೆ ಮುಂಭಾಗ ಕುಟುಂಬಸ್ಥರ ಆಕ್ರೋಶ

ಇದನ್ನೂ ಓದಿ : ಮಸಾಜ್‌ ಸೆಂಟರ್‌ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ : ಮಾಲೀಕ ಅರೆಸ್ಟ್‌

( Brahamavar: Raghavendra Rao Aroor Vishnumoorthi temple administrator Suicide )

Comments are closed.