ಉಡುಪಿ : ಪೆಟ್ರೋಲ್ ಬಂಕ್ ಮಾಲೀಕ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಉಡುಪಿ : ಕಟ್ಟಡದ ಮೇಲಿನಿಂದ ಹಾರಿ ಪೆಟ್ರೋಲ್ ಬಂಕ್ ಮಾಲೀಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಮಠದಬೆಟ್ಟು ಎಂಬಲ್ಲಿ ನಡೆದಿದೆ.

ಉತ್ತಮ್ ನಾಯಕ್ (30 ವರ್ಷ) ಎಂಬವರೇ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡವರು. ಆತ್ರಾಡಿಯಲ್ಲಿ ಪೆಟ್ರೋಲ್ ಬಂಕ್ ಮಾಲೀಕರಾಗಿರುವ ಉತ್ತಮ್ ನಾಯಕ್ ಅವರು ಕಳೆದ ನಾಲ್ಕೈದು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದರು. ಪತ್ನಿ ಮುಂಬೈನಲ್ಲಿ ನೆಲೆಸಿದ್ದರೆ, ಉತ್ತಮ್ ನಾಯಕ್ ಅವರು ಮಠದ ಬೆಟ್ಟುವಿನಲ್ಲಿರುವ ಫ್ಲ್ಯಾಟ್ ನ 3ನೇ ಮಹಡಿಯಲ್ಲಿ ವಾಸವಾಗಿದ್ದರು.

https://kannada.newsnext.live/covid-today-report-udupi-bangalore-corona-blast/

ಆದರೆ ಇಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://kannada.newsnext.live/ramesh-jarakiholi-reaction-about-audio-leak/

Comments are closed.