ಭಾನುವಾರ, ಜೂನ್ 15, 2025
HomeBreakingಉಡುಪಿ : ಸೀಲ್ ಡೌನ್ ಆದ ಗ್ರಾಮಗಳಲ್ಲಿ ನಾಳೆ, ನಾಡಿದ್ದು ಅಗತ್ಯ ವಸ್ತು ಖರೀದಿಗೆ ಅವಕಾಶ...

ಉಡುಪಿ : ಸೀಲ್ ಡೌನ್ ಆದ ಗ್ರಾಮಗಳಲ್ಲಿ ನಾಳೆ, ನಾಡಿದ್ದು ಅಗತ್ಯ ವಸ್ತು ಖರೀದಿಗೆ ಅವಕಾಶ : ಡಿಸಿ ಜಗದೀಶ್

- Advertisement -

ಉಡುಪಿ : ಕೋವಿಡ್ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ 50ಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳಿರುವ ಗ್ರಾಮ ಪಂಚಾಯ್ ಗಳ ವ್ಯಾಪ್ತಿಯಲ್ಲಿ ಸೀಲ್ ಡೌನ್ ಜಾರಿ ಮಾಡಲಾಗಿದೆ. ಆದ್ರೀಗ ಸೀಲ್ ಡೌನ್ ಗ್ರಾಮಗಳಲ್ಲಿಯೂ ಜೂನ್ 7 ಮತ್ತು 8 ರಂದು ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ 50ಕ್ಕೂ ಅಧಿಕ ಸೋಂಕಿತರಿರುವ ಸುಮಾರು 40ಕ್ಕೂ ಅಧಿಕ ಗ್ರಾಮ ಪಂಚಾಯತ್ ಗಳನ್ನು ಸೀಲ್ ಡೌನ್ ಮಾಡಲಾಗಿದೆ. ಸೀಲ್ ಡೌನ್ ಆಗಿರುವ ಗ್ರಾಮಗಳಲ್ಲಿನ ಗ್ರಾಮಸ್ಥರು ನಾಳೆ ಹಾಗೂ ನಾಡಿದ್ದು ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿ ಮಾಡಬಹುದಾಗಿದೆ.

ಸೀಲ್ ಡೌನ್ ಆಗಿರುವ ಗ್ರಾಮಗಳಲ್ಲಿ ಸೀಲ್ ಡೌನ್ ಆದೇಶವನ್ನು ಮುಂದುವರಿಸಬೇಕೆ ಅಥವಾ ಬೇಡವೇ ಅನ್ನುವ ಕುರಿತು ಜೂನ್ 8ರಂದು ನಿರ್ಧಾರ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular