ವಂಡಾರು : ಲ್ಯಾಪ್ ಟಾಪ್ ಗೆ ಸಿಡಿಲು ಬಡಿದು ಸಾಫ್ಟ್ ವೇರ್ ಇಂಜಿನಿಯರ್ ಸಾವು

ಬ್ರಹ್ಮಾವರ : ವರ್ಕ್ ಫ್ರಂ ಹೋಮ್ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಲ್ಯಾಪ್ ಟಾಪ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಸಿಡಿಲು ಬಡಿದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಸಮೀಪದ ವಂಡಾರಿನಲ್ಲಿ ನಡೆದಿದೆ.

ವಂಡಾರು ಗ್ರಾಮದ ಬೋರ್ಡಕಲ್ಲಿನ ನಿವಾಸಿ ಸಾಫ್ಟ್ ವೇರ್ ಇಂಜಿನಿಯರ್ ಚೇತನ್ (24 ವರ್ಷ) ಎಂಬಾತನೇ ಸಾವನ್ನಪ್ಪಿದ ದುರ್ದೈವಿ. ನಿನ್ನೆ ರಾತ್ರಿಯ ವೇಳೆಯಲ್ಲಿ ಚೇತನ್ ಲ್ಯಾಪ್ ಟಾಪ್ ನಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆಯಲ್ಲಿ ಲ್ಯಾಪ್ ಟಾಪ್ ಗೆ ಸಿಡಿಲು ಬಡಿದಿದೆ. ಇದರಿಂದಾಗಿ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಚೇತನ್ ನನ್ನು ಕೂಡಲೇ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ಹೊತ್ತಿಗಾಗಲೇ ಚೇತನ್ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಬೆಂಗಳೂರಿನ ಪ್ರತಿಷ್ಠಿತ ಕಂಪೆನಿಯ ಉದ್ಯೋಗಿಯಾಗಿದ್ದ ಸಾಫ್ಟ್ ವೇರ್ ಇಂಜಿನಿಯರ್ ಚೇತನ್, ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಹಲವು ತಿಂಗಳಿನಿಂದಲೂ ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದರು.

ಬಡತನದಲ್ಲಿಯೇ ಸಾಕಷ್ಟು ಕಷ್ಟಪಟ್ಟು ಚೇತನ್ ಎಂಜಿನಿಯರಿಂಗ್ ಪದವಿ ಮುಗಿಸಿ, ಮನೆಗೆ ಆಧಾರ ವಾಗಿದ್ದರು. ಅಕಾಲಿಕ ಮಳೆಯ ಅವಾಂತರದಿಂದ ಅವರು ಹೆತ್ತವರು ಮತ್ತು ಸಹೋದರಿಯನ್ನು ಅಗಲಿದ್ದಾರೆ.

Comments are closed.