ಬಸ್ಸಿನಲ್ಲಿ ವೈದ್ಯ ವಿದ್ಯಾರ್ಥಿನಿಗೆ ಯುವಕನಿಂದ ಕಿರುಕುಳ : ಕಾಮುಕನನ್ನು ಪೊಲೀಸರಿಗೊಪ್ಪಿಸಿದ್ರು ಜನರು

ಪುತ್ತೂರು : ಇತ್ತೀಚಿನ ದಿನಗಳಲ್ಲಿ ಕರಾವಳಿ ಭಾಗದ ಬಸ್ಸುಗಳು ಮಹಿಳೆಯರಿಗೆ ಎಷ್ಟು ಸೇಫ್ ಅನ್ನೋ ಪ್ರಶ್ನೆಯನ್ನು ಹುಟ್ಟು ಹಾಕುತ್ತಿದೆ. ಇದೀಗ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳಿಗೆ ಕಿರುಕುಳ ನೀಡುತ್ತಿದ್ದ ಕಾಮುಕನೋರ್ವನನ್ನು ಸಾರ್ವಜನಿಕರೇ ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಗಡಿಪಿಲ ಬಳಿ ನಡೆದಿದೆ.

ಪುತ್ತೂರು ಬಸ್ ನಿಲ್ದಾಣದ ಬಳಿಯಲ್ಲಿನ ಅಂಗಡಿಯೊಂದರ ಮಾಲೀಕನಾಗಿರುವ ನೌಫಲ್ ಎಂಬಾತನೇ ಬಂಧನಕ್ಕೊಳಗಾಗಿರುವ ಯುವಕ. ನಿನ್ನೆ ಸಂಜೆ ಸವಣೂರು ಮೂಲಕ ಕಡಬಕ್ಕೆ ತೆರಳುತ್ತಿದ್ದ ಬಸ್ಸನ್ನು ಹತ್ತಿದ್ದ ನೌಫಲ್ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಖಾಸಗಿ ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯೋರ್ವಳ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾನೆ. ವಿಷಯ ತಿಳಿದ ಸಂಘಟನೆಯೊಂದರ ಕಾರ್ಯಕರ್ತರು ಬಸ್ ಗಡಪ್ಪಿಲ ತಲುಪುತ್ತಿದ್ದಂತೆಯೇ ಬಸ್ಸನ್ನು ನಿಲ್ಲಿಸಿ ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

https://kannada.newsnext.live/maharastra-thane-lockdown-corona-covid-19-cases/

ವೈದ್ಯ ವಿದ್ಯಾರ್ಥಿನಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಕಾಮುಕ ಯುವಕನ ವಿರುದ್ದ ಪ್ರಕರಣ ದಾಖಲು ಮಾಡಿಕೊಂಡಿದ್ದು, ಪೊಲೀಸರು ವಿಚಾರಣೆಯನ್ನು ನಡೆಸುತ್ತಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆಯಷ್ಟೇ ಮಂಗಳೂರು ಹೊರವಲಯದಲ್ಲಿ ಮಹಿಳೆಗೆ ಕಿರುಕುಳ ನೀಡಿದ ಘಟನೆ ನಡೆದಿತ್ತು. ಪದೇ ಪದೇ ಇಂತಹ ಘಟನೆಗಳು ಮರಕುಳಿಸುತ್ತಿದ್ದ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

Comments are closed.