ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ಬಿಬಿಎಂಪಿ ನಾನಾ ಕಸರತ್ತುಗಳನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲೀಗ ‘ವೈದ್ಯರ ನಡೆ ಮನೆ ಬಾಗಿಲಿನ ಕಡೆ‘ ಅನ್ನೋ ಹೊಸ ಅಭಿಯಾನವನ್ನು ಆಯೋಜಿಸಲಾಗಿದೆ. ಈ ಅಭಿಯಾನಕ್ಕೆ ಇಂದು ಕಂದಾಯ ಸಚಿವ ಆರ್.ಅಶೋಕ್ ಚಾಲನೆ ನೀಡಿದ್ದಾರೆ.

ಬಿಬಿಎಂಪಿ ವತಿಯಿಂದ ನಡೆಯುತ್ತಿರುವ ಅಭಿಯಾನವಾಗಿದ್ದು, ಕೊರೋನಾ ಕಂಟ್ರೋಲ್ ಮಾಡಲು ಬಿಬಿಎಂಪಿ ಈ ಹಾದಿ ಹಿಡಿದಿದೆ. ಬಿಬಿಎಂಪಿ ಇದರ ಭಾಗವಾಗಿ ವೈದ್ಯರ ನಡೆ ಮನೆ ಬಾಗಿಲಿನ ಕಡೆ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಅಭಿಯಾನದಲ್ಲಿ ವೈದ್ಯರು ಮನೆ ಬಾಗಿಲಿಗೆ ಹೋಗಿ ಕೊರೋನಾ ಟೆಸ್ಟ್ ಮಾಡಲಿದ್ದಾರೆ.

ವಿಶೇಷ ತಂಡಗಳನ್ನು ರಚನೆ ಮಾಡಿರುವ ಬಿಬಿಎಂಪಿ, ಪ್ರತಿ ವಾರ್ಡ್ನಲ್ಲಿಯೂ ವೈದ್ಯರು ರೌಂಡ್ಸ್ ನಡೆಸಲಿದ್ದಾರೆ. ಒಂದು ತಂಡ ಕನಿಷ್ಠ ಅಂದರೂ 50 ಮನೆಗಳಿಗೆ ಭೇಟಿ ಕೊಡಬೇಕು. ಕೊರೋನಾ ರೋಗ ಲಕ್ಷಣ ಇರುವ ಮನೆ ಜನರ ಕೋವಿಡ್ ಟೆಸ್ಟ್ ಮತ್ತು ವ್ಯಾಕ್ಸಿನ್ ಬಗ್ಗೆಯೂ ತಂಡ ಮಾಹಿತಿ ಪಡೆಯಲಿದೆ.

ಪ್ರತೀ ವಾರ್ಡ್ ಗೆ 5 ವೈದ್ಯರ ತಂಡವಿರಲಿದೆ. ಅಗತ್ಯಕ್ಕನುಗುಣವಾಗಿ ಹೆಚ್ಚಿನ ತಂಡಗಳನ್ನುನಿಯೋಜನೆ. ಪ್ರತೀ ತಂಡದಲ್ಲಿ ಒಬ್ಬ ವೈದ್ಯಾಧಿಕಾರಿ ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳನ್ನು ಒಳಗೊಂಡ ತಂಡವಿರಲಿದೆ. ಮನೆ-ಮನೆಗೆ ತಂಡಗಳು ಭೇಟಿ ನೀಡುವ ಸಲುವಾಗಿ ವಾಹನಗಳ ನಿಯೋಜನೆ.

ಮನೆ ಭೇಟಿಯ ಸಮಯದಲ್ಲಿ ಕೋವಿಡ್-19 ಸೋಂಕಿತರು ಪತ್ತೆಯಾದಲ್ಲಿ, ಸದರಿ ಸೋಂಕಿತರಿಗೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರುವ ಹೋಂ ಐಸೋಲೇಷನ್ ಕಿಟ್ ನೀಡಲಾಗುವುದು. ಸಮೀಕ್ಷಾ ಕಾರ್ಯದಲ್ಲಿ ಪಡೆದ ಮಾಹಿತಿಯನ್ನು ಪ್ರತೀ ದಿನ ನಿಗದಿತ ಬಿಬಿಎಂಪಿ ವೆಬ್ ಸೈಟ್ ನಲ್ಲಿ ಹಾಕಬೇಕು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ವಿಶೇಷ ಆಯುಕ್ತ ರಂದೀಪ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಇದನ್ನೂ ಓದಿ : ಕೊರೊನಾ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲಾರಂಭ ಇಲ್ಲ : ಬಸವರಾಜ್ ಬೊಮ್ಮಾಯಿ
ಇದನ್ನೂ ಓದಿ : 10 ದಿನದಲ್ಲಿ 500 ಮಕ್ಕಳಿಗೆ ಕೊರೊನಾ : ಬೆಂಗಳೂರಲ್ಲಿ ಶುರುವಾಯ್ತಾ 3ನೇ ಅಲೆ