ಬೆಂಗಳೂರು : Bommai Tests Covid 19 Positive : ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ದೆಹಲಿ ಪ್ರವಾಸ ರದ್ದಾಗಿದೆ. ತಮಗೆ ಕೋವಿಡ್ ದೃಢಪಟ್ಟಿರುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ.
— Basavaraj S Bommai (@BSBommai) August 6, 2022
I have tested positive for Covid-19 with Mild symptoms and have isolated myself at home. Those who came in touch with me in last few days, kindly isolate yourself and get urself tested. My trip to Delhi stands cancelled.
— Basavaraj S Bommai (@BSBommai) August 6, 2022
ಸಿಎಂ ಬಸವರಾಜ ಬೊಮ್ಮಾಯಿ ಇಂದಿನಿಂದ ಎರಡು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳುವವರಿದ್ದರು.ಆಜಾದಿ ಕಾ ಅಮೃತ ಮಹೋತ್ಸವ ಕುರಿತಾದ ಸಭೆ ಹಾಗೂ ನೀತಿ ಆಯೋಗದ ಸಭೆಗಳಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗುವವರಿದ್ದರು. ಇಂದು ಬೆಳಗ್ಗೆ 11:30ಕ್ಕೆ ದೆಹಲಿಗೆ ಹೊರಟು ಆಗಸ್ಟ್ 7ರಂದು ಬೆಂಗಳೂರಿಗೆ ಮರಳುವವರಿದ್ದರು. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಕುರಿತಂತದೆ ಪಕ್ಷದ ವರಿಷ್ಠರ ಜೊತೆಯಲ್ಲಿ ಚರ್ಚೆ ನಡೆಸುವ ಬಗ್ಗೆಯೂ ಸಿಎಂ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದರು. ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಕುರಿತಂತೆ ಪ್ರಸ್ತಾಪಿಸಿದ್ದರು. ಇದಾದ ಬಳಿಕ ಕೇಂದ್ರ ಸಚಿವ ಅಮಿತ್ ಶಾ ಈ ವಿಚಾರವಾಗಿ ದೆಹಲಿಯಲ್ಲಿ ಮಾತನಾಡೋಣ ಎಂದು ಬೊಮ್ಮಾಯಿ ಬಳಿ ಹೇಳಿದ್ದರು ಎನ್ನಲಾಗಿದೆ.
ಕಳೆದ ಜನವರಿಯಲ್ಲಿಯೂ ಸಿಎಂ ಬಸವರಾಜ ಬೊಮ್ಮಾಯಿ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಇದೀಗ ಎರಡನೇ ಬಾರಿಗೆ ಅವರು ಕೊರೊನಾ ಸೋಂಕಿಗೆ ಒಳಗಾದಂತಾಗಿದೆ. ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ರದ್ದಾಗಿರುವುದು ಬಿಜೆಪಿ ಸಚಿವಾಕಾಂಕ್ಷಿಗಳಿಗೆ ನಿರಾಶೆ ಮೂಡಿಸಿದೆ.
ಇದನ್ನು ಓದಿ : Pramod Muthalik : ಹಿಂದುತ್ವಕ್ಕಾಗಿ ಹೊಸ ಪಕ್ಷ, ಯೋಗಿ ಮಾದರಿ ಆಡಳಿತ : ಬಿಜೆಪಿಗೆ ಶಾಕ್ ಕೊಟ್ಟ ಪ್ರಮೋದ್ ಮುತಾಲಿಕ್
ಇದನ್ನೂ ಓದಿ : ITR Refund : ನಿಮ್ಮ ಆದಾಯ ತೆರಿಗೆ ರಿಫಂಡ್ ಆಗಿದ್ಯಾ? ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
Chief Minister Basavaraj Bommai Tests Covid 19 Positive
Comments are closed.