ಮಂಗಳವಾರ, ಏಪ್ರಿಲ್ 29, 2025
HomeBreakingಒಂದೇ ದಿನ ಬರೋಬ್ಬರಿ 53 ಮಂದಿಗೆ ಸೋಂಕು : ಲಾಕ್ ಡೌನ್ ತೆರವಿನ ಬೆನ್ನಲ್ಲೇ ಕರುನಾಡನ್ನು...

ಒಂದೇ ದಿನ ಬರೋಬ್ಬರಿ 53 ಮಂದಿಗೆ ಸೋಂಕು : ಲಾಕ್ ಡೌನ್ ತೆರವಿನ ಬೆನ್ನಲ್ಲೇ ಕರುನಾಡನ್ನು ಬೆಚ್ಚಿ ಬೀಳಿಸಿದೆ ಕೊರೊನಾ

- Advertisement -

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪೀಡಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 53 ಮಂದಿಗೆ ಕೊರೊನಾ ಸೊಂಕು ಇರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ.

ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿದ್ದ ಬೆಳಗಾವಿಯಲ್ಲಿ ಬರೋಬ್ಬರಿ 22 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಗ್ರೀನ್ ಝೋನ್ ವ್ಯಾಪ್ತಿಯಲ್ಲಿದ್ದ ಶಿವಮೊಗ್ಗಕ್ಕೆ ತಬ್ಲಿಘಿಗಳು ಕಂಟಕವಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಂದೇ ದಿನ 8 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ, ಬಾಗಲಕೋಟೆಯಲ್ಲಿಯೂ 8 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಇನ್ನು ಭಟ್ಕಳದಲ್ಲಿಯೂ ಇಂದೂ ಕೂಡ ಕೊರೊನಾ ಶಾಕ್ ಕೊಟ್ಟಿದೆ. ಇಂದು ಮತ್ತೆ 7 ಮಂದಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಸಿಲಿಕಾನ್ ಸಿಟಿಯಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು 3 ಮಂದಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ. ಉಳಿದಂತೆ ಕಲಬುರಗಿ 3 ಹಾಗೂ ಚಿಕ್ಕಬಳ್ಳಾಪುರ ಹಾಗೂ ದಾವಣಗೆರೆಯಲ್ಲಿ 1 ಪ್ರಕರಣ ಪತ್ತೆಯಾಗಿದೆ.

ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 800 ಗಡಿದಾಟಿದೆ. ಕಳೆದ ಮೂರು ದಿನಗಳಲ್ಲಿ ಕೊರೊನಾ ಪೀಡಿತರ ಸಂಖ್ಯೆ 100 ದಾಟಿರುವುದು ಆತಂಕವನ್ನು ಮೂಡಿಸಿದೆ. ಮಾತ್ರವಲ್ಲ ಹಲವರ ವರದಿಗಳು ಇನ್ನಷ್ಟೇ ಬರಬೇಕಾಗಿರುವುದರಿಂದ ಆತಂಕ ತಂದೊಡ್ಡಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular