Charanjit Singh Channi : ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲೇ ಪಂಜಾಬ್ನಲ್ಲಿ ಕಾಂಗ್ರೆಸ್ಗೆ ಹೊಸ ಶಾಕ್ ಎದುರಾಗಿದೆ. ಅಕ್ರಮ ಮರಳು ಗಣಿಗಾರಿಕೆ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯ ಇಂದು ಬೆಳಗ್ಗೆ ಮೊಹಾಲಿಯಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣ್ಜೀತ್ ಸಿಂಗ್ ಚನ್ನಿ ಸಂಬಂಧಿಕರ ಮನೆಯಯಲ್ಲಿ ದಾಳಿ ನಡೆಸಿದೆ.
ಅಕ್ರಮ ಮರಳುಗಾರಿಕೆ ಪ್ರಕರಣದ ಪ್ರಮುಖ ಆರೋಪಿಯಾದ ಭೂಪಿಂದರ್ ಸಿಂಗ್ ಹನಿ ಪಂಜಾಬ್ ಸಿಎಂ ಚರಣ್ಜೀತ್ ಸಿಂಗ್ ಚನ್ನಿ ಅವರ ಸೋದರಳಿಯ ಆಗಿದ್ದಾರೆ. ಪ್ರಾಥಮಿಕ ತನಿಖೆಯ ವರದಿಯ ಪ್ರಕಾರ ಮೊಹಾಲಿ ಸೇರಿದಂತೆ ಪಂಜಾಬ್ನ 10 ರಿಂದ 12 ಕಡೆಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಪಂಜಾಬ್ ಸರ್ಕಾರ ಹಾಗೂ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಯನ್ನು ಒಪ್ಪಿಕೊಂಡಿರುವ ಪಂಜಾಬ್ನ ಚುನಾವಣಾ ಆಯೋಗವು ಗುರು ರವಿದಾಸ್ ಜಯಂತಿಯನ್ನು ಗಮನದಲ್ಲಿಟ್ಟುಕೊಂಡು ಪಂಜಾಬ್ನಲ್ಲಿ ಫೆಬ್ರವರಿ 16ರ ಬದಲಿಗೆ ಫೆಬ್ರವರಿ 20ರಂದು ಒಂದೇ ಹಂತದ ವಿಧಾನಸಭಾ ಚುನಾವಣೆ ನಡೆಸಲು ನಿರ್ಧರಿಸಿದೆ.
ಪಂಜಾಬ್ ಸಿಎಂ ಚರಣ್ಜೀತ್ ಸಿಂಗ್ ಚನ್ನಿ , ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳು, ಬಿಎಸ್ಪಿ ಮತ್ತು ಇತರೆ ಸಂಘಟನೆಗಳು ಫೆಬ್ರವರಿ 16ರಂದು ಗುರು ರವಿದಾಸ್ ಅವರ ಜನ್ಮ ವಾರ್ಷಿಕೋತ್ಸವವನ್ನು ಆಚರಿಸಲು ಉತ್ತರ ಪ್ರದೇಶದ ವಾರಣಾಸಿಗೆ ಲಕ್ಷಾಂತರ ಅನುಯಾಯಿಗಳು ಪ್ರಯಾಣಿಸುತ್ತಿರುವ ಹಿನ್ನೆಲೆಯಲ್ಲಿ ಮತದಾನದ ದಿನಾಂಕವನ್ನು ಮುಂದೂಡುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದವು.
ಇದನ್ನು ಓದಿ : Aishwarya Dhanush :ರಜನಿಕಾಂತ್ ಪುತ್ರಿ ಐಶ್ವರ್ಯ ಹಾಗೂ ನಟ ಧನುಷ್ ವಿಚ್ಚೇಧನ
ಇದನ್ನೂ ಓದಿ : Samantha comeback Bollywood : ಮತ್ತೆ ಸದ್ದು ಮಾಡಿದ ಸಮಂತಾ : ಬಾಲಿವುಡ್ ನಿಂದ ಬಂತು ಮೂರು ಸಿನಿಮಾ ಆಫರ್
ED raids Punjab Chief Minister Charanjit Singh Channi relative premises in Mohali