Emergency Meeting Karnataka : ಕರ್ನಾಟಕದಲ್ಲಿ ಕೋವಿಡ್ 4ನೇ ಅಲೆಯ ಭೀತಿ : ತುರ್ತು ಸಭೆ ಕರೆದ ಸಿಎಂ ಬಸವರಾಜ್‌ ಬೊಮ್ಮಾಯಿ

ಬೆಂಗಳೂರು : ಕರ್ನಾಟಕದಲ್ಲೀಗ ಕೋವಿಡ್‌ (Covid-19) ನಾಲ್ಕನೇ ಅಲೆಯ ಭೀತಿ ಎದುರಾಗಿದೆ. ನೆರೆಯ ರಾಜ್ಯಗಳಲ್ಲಿ ಕೋವಿಡ್‌ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲು ರಾಜ್ಯ ಸರಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿಂದು ಸಿಎಂ ಬಸವರಾಜ್‌ ಬೊಮ್ಮಾಯಿ ಅವರ ನೇತೃತ್ವದಲ್ಲಿಂದು ಉನ್ನತ ಮಟ್ಟದ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆಯನ್ನು (Emergency Meeting Karnataka) ಕರೆಯಲಾಗಿದೆ.

ಐಐಟಿ ಕಾನ್ಪುರದ ತಜ್ಞರು ನೀಡಿರುವ ವರದಿಯ ಪ್ರಕಾರ ಜೂನ್‌ನಲ್ಲಿ ಕೊರೊನಾ ನಾಲ್ಕನೇ ಅಲೆಯ ಆತಂಕ ಶುರುವಾಗಲಿದೆ. ಅದರಲ್ಲೂ ಬೆಂಗಳೂರಲ್ಲಿ ಈಗಾಗಲೇ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಅಲ್ಲದೇ ನೆರೆಯ ರಾಜ್ಯಗಳಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇದರ ಬೆನ್ನಲ್ಲೇ ಕರ್ನಾಟಕ ಸರಕಾರ ಎಚ್ಚೆತ್ತುಕೊಂಡಿದೆ.

ಕೋವಿಡ್‌ ತಜ್ಞರ ಸಮಿತಿ ಈಗಾಗಲೇ ಕರ್ನಾಟಕವು ನಾಲ್ಕನೇ ಕೋವಿಡ್‌ ಅಲೆಯಿಂದ ತತ್ತರಿಸಲಿದೆ ಎಂಬ ಮಾಹಿತಿಯನ್ನು ನೀಡಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಸಭೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್‌, ಕಂದಾಯ ಸಚಿವ ಆರ್.‌ ಅಶೋಕ್‌, ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್‌ ನಾರಾಯಣ್‌ ಸೇರಿದಂತೆ ಕೋವಿಡ್‌ ತಾಂತ್ರಿಕ ಸಮಿತಿಯ ಅಧ್ಯಕ್ಷರು ಹಾಗೂ ಸಮಿತಿಯ ಸದಸ್ಯರು ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಕೋವಿಡ್‌ ನಾಲ್ಕನೇ ಅಲೆಯ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ.

ಹಲವು ದೇಶಗಳು ಈಗಾಗಲೇ ಕೋವಿಡ್‌ ನಾಲ್ಕನೇ ಅಲೆಗೆ ತತ್ತರಿಸಿ ಹೋಗಿವೆ. ಈ ಹಿನ್ನೆಲೆಯಲ್ಲಿ ಭಾರತವೂ ನಾಲ್ಕನೇ ಅಲೆಯ ಆತಂಕ ಎದುರಿಸುತ್ತಿದೆ. ಈಗಾಗಲೇ ಕೋವಿಡ್‌ ಉಪ ತಳಿಗಳ ಸೋಂಕಿತ ಪ್ರಯಾಣ ಏರಿಕೆಯನ್ನು ಕಾಣುತ್ತಿರುವುದು ತಜ್ಞರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ವಿದೇಶಗಳಲ್ಲಿ ಕೈಗೊಂಡಿರುವ ಕಠಿಣ ಕ್ರಮಗಳನ್ನು ಜಾರಿಗೆ ತರುವ ಸಾಧ್ಯತೆಯಿದೆ. ಇಂದಿನ ಸಭೆಯಲ್ಲಿ ತಜ್ಞರು ನೀಡುವ ಸಲಹೆಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.

ಕೋವಿಡ್‌ ನಿಯಂತ್ರಣಕ್ಕೆ ಆರಂಭದಿಂದಲೂ ಮಾಸ್ಕ್‌ ಕಡ್ಡಾಯಗೊಳಿಸುವ ಕಾರ್ಯವನ್ನು ಸರಕಾರಗಳು ಮಾಡಿವೆ. ಆದರೆ ಕೋವಿಡ್‌ ಮೂರನೇ ಅಲೆಯ ಪ್ರಮಾಣ ಕಡಿಮೆ ಆಗುತ್ತಲೇ ಜನರು ಮಾಸ್ಕ್‌ ಮರೆತು ಬಿಟ್ಟಿದ್ದರು. ಹೀಗಾಗಿ ರಾಜ್ಯ ಸರಕಾರ ಮಾಸ್ಕ್‌ ಕಡ್ಡಾಯಗೊಳಿಸುವ ಸಾಧ್ಯತೆಯಿದೆ. ಇನ್ನೊಂದೆಡೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಪಾಲನೆಯನ್ನು ಕಡ್ಡಾಯಗೊಳಿಸುವ ಸಾಧ್ಯತೆಯಿದೆ. ಕೋವಿಡ್‌ ಪ್ರಮಾಣ ಹೆಚ್ಚಳವಾಗುತ್ತಿದ್ದಂತೆಯೇ 50:50 ನಿಯಮ ಜಾರಿಗೆ ಬರುವ ಸಾಧ್ಯತೆಯಿದೆ. ಖಾಸಗಿ ವಲಯದ ಐಟಿ, ಬಿಟಿ ಹಾಗೂ ಖಾಸಗಿ ಕಂಪೆನಿಗಳಿಗೆ ವರ್ಕ್‌ ಫ್ರಂ ಹೋಮ್‌ ಮುಂದುವರಿಕೆ ಮಾಡುವ ಸಾಧ್ಯತೆಯಿದೆ.

ಈಗಾಗಲೇ ಮೂರು ಬಾರಿ ಲಾಕ್‌ಡೌನ್‌ ಹೇರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಹೀಗಾಗಿ ನಾಲ್ಕನೇ ಅಲೆಯಲ್ಲಿ ಲಾಕ್‌ಡೌನ್‌ ಹೊರತು ಪಡಿಸಿ ಜನ ಸಾಮಾನ್ಯರ ಮೇಲೆ ಹೊರೆಯಾಗದ ರೀತಿಯಲ್ಲಿ ನಿಯಮಗಳನ್ನು ಜಾರಿ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗುತ್ತಿದೆ. ಇಂದು ನಡೆಯುವ ಸಭೆಯಲ್ಲಿ ತಜ್ಞರು ನೀಡುವ ವರದಿಯನ್ನು ಆಧರಿಸಿ ಸರಕಾರ ಕೋವಿಡ್‌ ನಿಯಂತ್ರಣಕ್ಕೆ ಮುಂದಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : ಕೊರೊನಾ ಸೋಂಕು ಹೆಚ್ಚಳದ ನಡುವೆಯೇ ಶಾಲೆಗಳಲ್ಲಿ ಮಾರ್ಗಸೂಚಿ ಜಾರಿ

ಇದನ್ನೂ ಓದಿ : ದೆಹಲಿಯಲ್ಲಿ ಶುರುವಾಯ್ತಾ ಕ್ಸಿ ರೂಪಾಂತರಿ ಅಬ್ಬರ? ಪ್ರಯೋಗಾಲಯದ ವರದಿಗೆ ಕಾದ ಸರ್ಕಾರ

Emergency Meeting Karnataka, Covid-19 4th wave Basavaraj Bommai leading the meeting today

Comments are closed.