ಮಡಿಕೇರಿ : ಕೊರೊನಾ ವೈರಸ್ ಸೋಂಕು ಇದೀಗ ಶಾಲೆ, ಕಾಲೇಜುಗಳಲ್ಲಿ ಪತ್ತೆಯಾಗುತ್ತಿದೆ. ಇದೀಗ ಕೊಡಗು ಜಿಲ್ಲೆಯ ಮಡಿಕೇರಿ ( Madikeri ) ನಗರದ ಖಾಸಗಿ ಶಾಲೆಯಲ್ಲಿನ (Students Corona) 9 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತ ಮಕ್ಕಳನ್ನು ಐಸೋಲೇಷನ್ಗೆ ಒಳಪಡಿಸಲಾಗಿದ್ದು, ಪ್ರಾಥಮಿಕ ಸಂಪರ್ಕಿತರನ್ನು ಕೊರೊನಾ ಟೆಸ್ಟ್ಗೆ ಒಳಪಡಿಸಲಾಗಿದೆ.
ಒಂದೇ ಶಾಲೆಯಲ್ಲಿನ ಒಂಬತ್ತು ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆದರೆ ಯಾವುದೇ ಮಕ್ಕಳಿಗೆ ಸೋಂಕಿನ ಲಕ್ಷಣಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೊಡಗು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕರೇಟ್ ಅವರು ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಶಾಲೆ ಕಾಲೇಜುಗಳಲ್ಲಿ ಕೊರೊನಾ ವೈರಸ್ ಸೋಂಕು ವಿದ್ಯಾರ್ಥಿಗಳಲ್ಲಿ ಪತ್ತೆಯಾಗುತ್ತಿದೆ. ಧಾರವಾಡದಲ್ಲಿ ಮೂನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಎಸ್ಡಿಎಂ ಕಾಲೇಜನ್ನು ಸೀಲ್ಡೌನ್ ಮಾಡಲಾಗಿದೆ. ಇನ್ನೊಂದೆಡೆಯಲ್ಲಿ ಶಿವಮೊಗ್ಗ ನಂಜಪ್ಪ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ತುಮಕೂರು ಜಿಲ್ಲೆಯ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಮತ್ತೆ ಐದು ಮಂದಿಗೆ ಸೋಂಕು ದೃಢಪಟ್ಟಿದೆ. ಎಲ್ಲಾ ವಿದ್ಯಾರ್ಥಿಗಳು ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಇನ್ನು ಹಾಸನ ಜಿಲ್ಲೆಯ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇನ್ನೊಂದೆಡೆಯಲ್ಲಿ ರಾಜ್ಯದಲ್ಲಿ ಓಮಿಕ್ರಾನ್ ವೈರಸ್ ಭೀತಿ ಹೆಚ್ಚುತ್ತಿದ್ದು, ಸೋಂಕಿತರ ಸಂಖ್ಯೆಯೂ ಏರಿಕೆಯನ್ನು ಕಾಣುತ್ತಿದೆ. ಇದೀಗ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಒಳಗಾಗಿದ್ದ ಮೈಸೂರು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳ ಸ್ವ್ಯಾಬ್ನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಆದರೆ ಎಲ್ಲಾ ವಿದ್ಯಾರ್ಥಿಗಳ ಓಮಿಕ್ರಾನ್ ಟೆಸ್ಟ್ ರಿಪೋರ್ಟ್ ನೆಗೆಟಿವ್ ಬಂದಿದೆ.
Omicron : ರಾಜ್ಯದಲ್ಲಿ ತುರ್ತು ಸಭೆ ಕರೆದ ಸಿಎಂ ಬಸವರಾಜ್ ಬೊಮ್ಮಾಯಿ
ಬೆಂಗಳೂರು : ಕರ್ನಾಟಕದಲ್ಲಿ ಇಬ್ಬರಿಗೆ ಓಮಿಕ್ರಾನ್ (Omicron) ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತುರ್ತು ಸಭೆಯನ್ನು (Omicron emergency meeting) ಕರೆದಿದ್ದಾರೆ. ಹಿರಿಯ ಅಧಿಕಾರಿಗಳು, ಸಚಿವರ ಜೊತೆಗೆ ಚರ್ಚೆ ನಡೆಸುವ ಸಾಧ್ಯತೆಯಿದೆ. ಈಗಾಗಲೇ ಬಿಬಿಎಂಪಿ ದಕ್ಷಿಣ ಆಫ್ರಿಕಾದಿಂದ ವಾಪಾಸಾಗಿರುವವರ ಮಾಹಿತಿಯನ್ನು ಕಲೆ ಹಾಕುವ ಕಾರ್ಯವನ್ನು ಮಾಡುತ್ತಿದೆ.
ದೇಶದಲ್ಲಿ ಕೊನೆಗೂ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಅದ್ರಲ್ಲೂ ಕರ್ನಾಟಕದ ಇಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ರಾಜ್ಯದಲ್ಲಿ ಕಟ್ಟೆಚ್ಚರವಹಿಸುವಂತೆ ಸೂಚನೆಯನ್ನು ನೀಡಿದೆ. ದೆಹಲಿಗೆ ಭೇಟಿ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ನಾಳೆ ರಾಜ್ಯಕ್ಕೆ ವಾಪಾಸಾಗಿದ್ದಾರೆ. ಈಗಾಗಲೇ ಒಮಿಕ್ರಾನ್ ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವರು, ಪ್ರಧಾನಿಗಳಿಂದ ಸೂಚನೆಯನ್ನು ಪಡೆದಿದ್ದಾರೆ ಎನ್ನಲಾಗುತ್ತಿದೆ. ಸಭೆಯಲ್ಲಿ ಎಲ್ಲಾ ತಜ್ಞರು, ಆರೋಗ್ಯ ಅಧಿಕಾರಿಗಳು ಮತ್ತು ಸಚಿವರು ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ತಾಂತ್ರಿಕವಾಗಿ COVID-19 ವೇರಿಯಂಟ್ B.1.1.529 ಎಂದು ಕರೆಯಲ್ಪಡುವ Omicron ಅನ್ನು ನವೆಂಬರ್ 23 ರಂದು ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾಗಿತ್ತು. ನಂತರ ಜಾಗತಿಕ ಎಚ್ಚರಿಕೆಯನ್ನು ನೀಡಿದೆ. ಓಮಿಕ್ರಾನ್ ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯವನ್ನು ಹೊಂದಿದೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇನ್ನೊಂದೆಡೆಯಲ್ಲಿ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಅದ್ರಲ್ಲೂ ಶಾಲೆ, ಕಾಲೇಜುಗಳೇ ಕೊರೊನಾ ಹಾಟ್ಸ್ಪಾಟ್ ಆಗಿ ಮಾರ್ಪಾಡು ಹೊಂದುತ್ತಿವೆ. ಶಿವಮೊಗ್ಗದ ನಂಜಪ್ಪ ನರ್ಸಿಂಗ್ ಕಾಲೇಜಿನಲ್ಲಿ ಕೇರಳದ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ -9 ಪಾಸಿಟಿವ್ ದೃಢಪಟ್ಟಿದ್ದು, ಗುರುವಾರ ಕಾಲೇಜು ಮತ್ತು ಆಸ್ಪತ್ರೆಯನ್ನು ಮುಚ್ಚಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೊಂದೆಡೆಯಲ್ಲಿ ಮೈಸೂರಿನಲ್ಲಿ ನರ್ಸಿಂಗ್ ಕೋರ್ಸ್ಗೆ ಒಳಗಾಗುತ್ತಿರುವ ಕೇರಳದ 72 ವಿದ್ಯಾರ್ಥಿಗಳು ಕೋವಿಡ್ಗೆ ಧನಾತ್ಮಕ ಪರೀಕ್ಷೆ ನಡೆಸಿದ ನಂತರ ಮೈಸೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಪ್ರಕರಣಗಳನ್ನು ಮೊದಲೇ ಪತ್ತೆ ಹಚ್ಚಲು ಮತ್ತು ವೈರಸ್ ಹರಡುವುದನ್ನು ತಡೆಯಲು ಮೈಸೂರಿನಲ್ಲಿ 5,000 ಕೋವಿಡ್ ಪರೀಕ್ಷೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶಿಸಿದ್ದಾರೆ.
ಇದನ್ನೂ ಓದಿ : ಏನಿದು ಒಮಿಕ್ರಾನ್ ರೂಪಾಂತರಿ..? ಇದರ ಲಕ್ಷಣಗಳೇನು..?ಮುಂಜಾಗ್ರತಾ ಕ್ರಮಗಳೇನು..? ಇಲ್ಲಿದೆ ಮಾಹಿತಿ
ಇದನ್ನೂ ಓದಿ : DOCTORS OMICRON : ಬೆಂಗಳೂರಿನ ಇಬ್ಬರು ವೈದ್ಯರಿಗೆ ಓಮಿಕ್ರಾನ್ ದೃಢ : ಇಬ್ಬರೂ ಕೂಡ ವಿದೇಶಿ ಪ್ರಯಾಣ ಮಾಡಿಲ್ಲ !
( 9 students tested corona positive in Madikeri )