ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಧಾನಕ್ಕೆ ಇಳಿಕೆಯಾಗುತ್ತಿದೆ. ಆದ್ರೆ ಬೆಂಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರಿನಲ್ಲಿ ಸೋಂಕು ಸಂಪೂರ್ಣವಾಗಿ ಇಳಿಕೆಯಾಗದೇ ಇರೋದು ಆತಂಕವನ್ನು ಮೂಡಿಸಿದೆ.
ಕರ್ನಾಟಕದಲ್ಲಿಂದು ಒಟ್ಟು 1,639 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 2,214 ಮಂದಿ ಗುಣಮುಖರಾಗಿದ್ದಾರೆ. ಅಲ್ಲದೇ ಒಂದೇ ದಿನ 36 ಮಂದಿಯನ್ನು ಕೊರೊನಾ ಸೋಂಕು ಬಲಿ ಪಡೆದಿದೆ. ಆದರೆ ಯಾದಗಿರಿ ಹಾಗೂ ಬೀದರ್ ಜಿಲ್ಲೆಯಲ್ಲಿ ಶೂನ್ಯ ಕೊರೊನಾ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 28,88,341ಕ್ಕೆ ಏರಿಕೆಯಾಗಿದೆ. ಸದ್ಯ 25,645 ಸಕ್ರಿಯ ಪ್ರಕರಣಗಳು ಇದ್ದು, ಇದುವರೆಗೆ 28,26,411 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಇದುವರೆಗೆ 36,262 ಮಂದಿ ಮರಣ ಹೊಂದಿದ್ದಾರೆ.
ಬೆಂಗಳೂರು ನಗರ 419, ಬಾಗಲಕೋಟೆ 3, ಬಳ್ಳಾರಿ 14, ಬೆಳಗಾವಿ 61, ಬೆಂಗಳೂರು ಗ್ರಾಮಾಂತರ 25, ಚಾಮರಾಜನಗರ 22, ಚಿಕ್ಕಬಳ್ಳಾಪುರ 15, ಚಿಕ್ಕಮಗಳೂರು 92, ಚಿತ್ರದುರ್ಗ 29, ದಕ್ಷಿಣ ಕನ್ನಡ 190, ದಾವಣಗೆರೆ 13, ಧಾರವಾಡ 19, ಗದಗ 1, ಹಾಸನ 141, ಹಾವೇರಿ 2, ಕಲಬುರಗಿ 2, ಕೊಡಗು 63, ಕೋಲಾರ 35, ಕೊಪ್ಪಳ 5, ಮಂಡ್ಯ 60, ಮೈಸೂರು 160, ರಾಯಚೂರು 1, ರಾಮನಗರ 5, ಶಿವಮೊಗ್ಗ 37, ತುಮಕೂರು 63, ಉಡುಪಿ 104, ಉತ್ತರ ಕನ್ನಡ 48, ವಿಜಯಪುರದಲ್ಲಿ 10 ಪ್ರಕರಣ ದೃಢಪಟ್ಟಿದೆ.