Lata Mangeshkar : ಕೋವಿಡ್ ಸೋಂಕಿಗೆ ಒಳಗಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಈಗಲೂ ಐಸಿಯುವಿನಲ್ಲೇ ಇದ್ದು ಅವರಿಗೆ ಚಿಕಿತ್ಸೆ ಮುಂದುವರಿದಿದೆ. ದಿನದಿಂದ ದಿನಕ್ಕೆ ಲತಾ ಮಂಗೇಶ್ಕರ್ ಕೊರೊನಾದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಕೋವಿಡ್ 19 ಹಾಗೂ ನ್ಯುಮೋನಿಯಾ ಸೋಂಕಿಗೆ ಒಳಗಾಗಿರುವ ಹಿನ್ನೆಲೆಯಲ್ಲಿ ಲತಾ ಮಂಗೇಶ್ಕರ್ ಆರೋಗ್ಯದ ಮೇಲೆ ವೈದ್ಯರು ಸಂಪೂರ್ಣ ನಿಗಾ ಇಟ್ಟಿದ್ದಾರೆ. ಆರು ಮಂದಿ ವೈದ್ಯರ ತಂಡ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಲತಾ ಮಂಗೇಶ್ಕರ್ರ ಆರೈಕೆಯಲ್ಲಿ ತೊಡಗಿದ್ದಾರೆ. ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಒಳ್ಳೆಯ ಚೇತರಿಕೆ ಕಂಡು ಬರ್ತಿದೆ ಅಂತಾ ವೈದ್ಯರು ತಿಳಿಸಿದ್ದಾರೆ. ಲತಾ ಮಂಗೇಶ್ಕರ್ರಿಗೆ ಟ್ರೀಟ್ಮೆಂಟ್ ನೀಡುತ್ತಿರುವ ವೈದ್ಯ ಡಾ. ಪ್ರತೀತ್ ಸಂಧಾನಿ , ಲತಾ ಮಂಗೇಶ್ಕರ್ ಇನ್ನೂ ಐಸಿಯುವಿನಲ್ಲಿಯೇ ಇದ್ದಾರೆ.ಆದರೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ ಎಂದು ಹೇಳಿದರು.
ಭಾರತದ ಗಾನ ಕೋಗಿಲೆ ಎಂಬ ಬಿರುದು ಪಡೆದಿರುವ 92 ವರ್ಷದ ಹಿರಿಯ ಗಾಯಕಿ ಲತಾ ಮಂಗೇಶ್ಕರ್ರನ್ನು 2 ದಿನಗಳ ಹಿಂದೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊರೊನಾ ಸೋಂಕಿಗೆ ಒಳಗಾದ ಲತಾ ಮಂಗೇಶ್ಕರ್ರಿಗೆ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದ್ದವು. ಆದರೆ ಅವರ ವಯಸ್ಸನ್ನು ಗಮನದಲ್ಲಿಟ್ಟುಕೊಂಡು ಮುಂಜಾಗ್ರತಾ ಕ್ರಮವಾಗಿ ಅವರನ್ನು ಐಸಿಯುವಿಗೆ ಶಿಫ್ಟ್ ಮಾಡಲಾಗಿದೆ.
ನ್ಯುಮೋನಿಯಾದಿಂದಾಗಿ ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ 2019ರ ನವೆಂಬರ್ ತಿಂಗಳಲ್ಲಿ ಲತಾ ಮಂಗೇಶ್ಕರ್ರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 28 ದಿನಗಳ ಬಳಿಕ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
1942ರಲ್ಲಿ ಕೇವಲ 13 ವರ್ಷ ವಯಸ್ಸಿನಲ್ಲಿ ತಮ್ಮ ವೃತ್ತಿ ಜೀವನ ಆರಂಭಸಿದ ಲತಾ ಮಂಗೇಶ್ಕರ್ ಈವರೆಗೆ ಭಾರತದ ವಿವಿಧ ಭಾಷೆಗಳಲ್ಲಿ 30 ಸಾವಿರಕ್ಕೂ ಅಧಿಕ ಹಾಡುಗಳಿಗೆ ದನಿಯಾಗಿದ್ದಾರೆ. ಬರೋಬ್ಬರಿ 7 ದಶಕಗಳ ಜರ್ನಿಯಲ್ಲಿ ಲತಾ ಮಂಗೇಶ್ಕರ್ ಅಪಾರ ಅಭಿಮಾನಿ ಬಳಗವನ್ನೂ ಸಂಪಾದಿಸಿದ್ದಾರೆ. ಅಜೀಬ್ ದಾಸತಾ ಹೈ ಯೇ, ಪ್ಯಾರ್ ಕಿಯಾ ತೋ ಡರನಾ ಕ್ಯಾ , ನೀಲಾ ಆಸ್ಮಾನ್ ಸೋ ಗಯಾ ಹಾಗೂ ತೇರೆ ಲಿಯೇ ಲತಾ ಮಂಗೇಶ್ಕರ್ರಿಗೆ ಹೆಸರು ತಂದುಕೊಟ್ಟಂತಹ ಹಾಡುಗಳಾಗಿದೆ.
ಸಿನಿಮಾದ ಗಾಯನ ಲೋಕದಲ್ಲಿ ಲತಾ ಮಂಗೇಶ್ಕರ್ ಮಾಡಿದ ಅಪ್ರತಿಮ ಸಾಧನೆಗಳನ್ನು ಗಮನಿಸಿ ಕೇಂದ್ರ ಸರ್ಕಾರವು ಇವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು 2001ರಲ್ಲಿ ನೀಡಿ ಗೌರವಿಸಿದೆ. ಇದರ ಜೊತೆಯಲ್ಲಿ ಪದ್ಮ ಭೂಷಣ, ಪದ್ಮ ವಿಭೂಷಣ ಹಾಗೂ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಸಾಕಷ್ಟು ಅತ್ಯುನ್ನತ ಪ್ರಶಸ್ತಿಗಳು ಇವರ ಮುಡಿಗೇರಿದೆ.
Lata Mangeshkar health update: Veteran singer still in ICU, doctors note slight improvement
ಇದನ್ನು ಓದಿ : PM Modi emergency meeting : ಭಾರತದಲ್ಲಿ ಕೋವಿಡ್ ಆರ್ಭಟ : ಪ್ರಧಾನಿ ಮೋದಿ ನೇತೃತ್ವದಲ್ಲಿ ಎಲ್ಲಾ ಸಿಎಂಗಳ ಜೊತೆ ತುರ್ತು ಸಭೆ
ಇದನ್ನೂ ಓದಿ : Mekedatu Government Order : ಮೇಕೆದಾಟು ಪಾದಯಾತ್ರೆಯನ್ನು ತಕ್ಷಣವೇ ನಿಲ್ಲಿಸಿ : ಸರಕಾರದ ಅಧಿಕೃತ ಆದೇಶ