ಲಾಕ್ ಡೌನ್ ನಿರ್ಧಾರ ಜಿಲ್ಲಾಧಿಕಾರಿಗಳಿಗೆ ಪರಮಾಧಿಕಾರ : ಸಿಎಂ ಯಡಿಯೂರಪ್ಪ

0

ಬೆಂಗಳೂರು : ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಗಳಲ್ಲಿ ಲಾಕ್ ಡೌನ್ ಹೇರಿಕೆ ಮಾಡುವ ನಿರ್ಧಾರವನ್ನು ಆಯಾಯ ಜಿಲ್ಲಾಡಳಿತ ತೆಗೆದುಕೊಳ್ಳಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಪರೆನ್ಸ್ ನಡೆಸುತ್ತಿದ್ದಾರೆ. ವಿಡಿಯೋ ಕಾನ್ಪರೆನ್ಸ್ ನಲ್ಲಿ ಆಯಾಯ ಜಿಲ್ಲಾಧಿಕಾರಿಗಳಿಂದ ಕೊರೊನಾ ಸೋಂಕಿತರ ಸಂಖ್ಯೆ, ಮರಣ ಹೊಂದಿದವರ ಪ್ರಮಾಣ. ಜಿಲ್ಲೆಯಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿಯನ್ನು ಪಡೆಯುತ್ತಿದ್ದಾರೆ. ಸಭೆಯಲ್ಲಿ ಆಯಾಯ ಜಿಲ್ಲೆಗಳಲ್ಲಿ ಲಾಕ್ ಡೌನ್ ಹೇರಿಕೆಯ ಕುರಿತು ಜಿಲ್ಲಾಡಳಿತಗಳೇ ನಿರ್ಧಾರವನ್ನು ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಲಾಕ್ ಡೌನ್ ಮಾಡುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ. ಹೀಗಾಗಿ ತಾನು ಯಾರಿಗೂ ಕೂಡ ಲಾಕ್ ಡೌನ್ ಹೇರಿಕೆ ಮಾಡುವ ಕುರಿತು ಸೂಚನೆಯನ್ನು ನೀಡುವುದಿಲ್ಲ. ಜಿಲ್ಲಾಧಿಕಾರಿಗಳು ಯಾವುದೇ ರೀತಿಯ ನಿರ್ಧಾರಗಳನ್ನು ಕೈಗೊಳ್ಳಬಹುದು ಎಂದು ಸೂಚನೆಯನ್ನು ನೀಡಿದ್ದಾರೆ. ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆ ನಡೆಯುತ್ತಿದ್ದು, ಆರಂಭದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ.

Leave A Reply

Your email address will not be published.