ರಂಭಾಪುರಿ ಜಗದ್ಗುರುಗಳಿಗೆ ಕೊರೊನಾ ಸೋಂಕು ಧೃಡ !

0

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಇದೀಗ ಬಾಳೆಹೊನ್ನೂರಿನಲ್ಲಿರರಂಬಾಪುರ ಮಠದ ಜಗದ್ಗುರುಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ರಂಭಾಪುರಿ ಶ್ರೀಗಳು ಬೆಂಗಳೂರು ಪ್ರವಾಸದಲ್ಲಿದ್ದು, ನಿನ್ನೆ ರಾತ್ರಿಯಿಂದ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ತಪಾಸಣೆಗೆ ಒಳಪಟ್ಟಿದ್ದಾರೆ. ಈ ವೇಳೆಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ವೈದ್ಯರು ಶ್ರೀಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ಸೂಚನೆಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಂಭಾಪುರ ಶ್ರೀಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave A Reply

Your email address will not be published.