IPL 2026 : ಆರ್​ಸಿಬಿ ಅಭಿಮಾನಿಗಳ ಸ್ಮರಣಾರ್ಥ ಸ್ಮಾರಕ ನಿರ್ಮಾಣ : ವಿಘ್ನ ನಿವಾರಣೆಗೆ ಚಿನ್ನಸ್ವಾಮಿಯಲ್ಲಿ ಹೋಮ-ಹವನ

ಕಳೆದ ವರ್ಷ ಜೂನ್​ 4 ಆರ್​ಸಿಬಿ ಅಭಿಮಾನಿಗಳ ಪಾಲಿಗೆ ಕರಾಳ ದಿನವಾಗಿತ್ತು. ಮೊದಲ ಬಾರಿಗೆ ಐಪಿಎಲ್​ ಕಪ್​ ಗೆದ್ದಿದ್ದ ಆರ್​ಸಿಬಿ ಆಟಗಾರರು ಬೆಂಗಳೂರಿನಲ್ಲಿ ವಿಜಯೋತ್ಸವ ಸಂಭ್ರಮದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಮೃತಪಟ್ಟಿದ್ದರು.

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌ ( Indian Premier League) ಗೆ ಕ್ಷಣಗಣನೆ ಆರಂಭಗೊಂಡಿದೆ. ಐಪಿಎಲ್‌ ( IPL 2026)  ಆರಂಭಿಕ ಪಂದ್ಯ ಬೆಂಗಳೂರಲ್ಲಿ ನಡೆಯಲಿದ್ದು, ಚಿನ್ನಸ್ವಾಮಿ ಕ್ರೀಡಾಂಗಣ (chinnaswamy stadium ) ಸರ್ವ ರೀತಿಯಲ್ಲಿಯೂ ಸಜ್ಜಾಗುತ್ತಿದೆ. ಈ ನಡುವಲ್ಲೇ ಐಪಿಎಲ್‌ ವಿಜಯೋತ್ಸವದ ಸಂಭ್ರಮದಲ್ಲಿ ಮಡಿದವರಿಗೆ ಹೋಮ -ಹವನದ ಜೊತೆಗೆ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದೆ.

ಕಳೆದ ವರ್ಷ ಜೂನ್​ 4 ಆರ್​ಸಿಬಿ ಅಭಿಮಾನಿಗಳ ಪಾಲಿಗೆ ಕರಾಳ ದಿನವಾಗಿತ್ತು. ಮೊದಲ ಬಾರಿಗೆ ಐಪಿಎಲ್​ ಕಪ್​ ಗೆದ್ದಿದ್ದ ಆರ್​ಸಿಬಿ ಆಟಗಾರರು ಬೆಂಗಳೂರಿನಲ್ಲಿ ವಿಜಯೋತ್ಸವ ಸಂಭ್ರಮದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಮೃತಪಟ್ಟಿದ್ದರು.

ಈ ವರ್ಷದ ಐಪಿಎಲ್​ ಪಂದ್ಯಾವಳಿ ಆರಂಭಗೊಳ್ಳಲು ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ಮೃತ ಆರ್​ಸಿಬಿ ಅಭಿಮಾನಿಗಳ ಸ್ಮರಣಾರ್ಥ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗಿದೆ. ಈ ಬಾರಿಯ ಐಪಿಎಲ್​ ಪಂದ್ಯಾವಳಿಯಲ್ಲಿ ಯಾವುದೇ ರೀತಿಯ ಅವಘಡ ಸಂಭವಿಸದೇ ಇರಲಿ ಎಂದು ಪ್ರಾರ್ಥಿಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೃತ್ಯುಂಜಯ ಹೋಮ,ಗಣಹೋಮ ಹಾಗೂ ಲಕ್ಷ್ಮೀ ಹೋಮ ನೆರವೇರಿಸಲಾಯಿತು.

Also Read : ಐಪಿಎಲ್​ನ ಶ್ರೀಮಂತ ತಂಡವಾಗಿ ಹೊರಹೊಮ್ಮಿದ ಆರ್​ಸಿಬಿ: ದಾಖಲೆಯ ಮೊತ್ತಕ್ಕೆ ಮಾರಾಟ

ಗೃಹಸಚಿವ ಡಾ. ಜಿ ಪರಮೇಶ್ವರ್​, ಶಾಸಕ ಎನ್​.ಎ ಹ್ಯಾರಿಸ್​, ಕೆಎಸ್​ಸಿಎ ಅಧ್ಯಕ್ಷ ವೆಂಕಟೇಶ್​ ಪ್ರಸಾದ್​ ಸೇರಿದಂತೆ ಅನೇಕರು ಭಾಗಿಯಾಗಿದ್ರು. ಅಲ್ಲದೇ ಚಿನ್ನಸ್ವಾಮಿಯ ಗೇಟುಗಳಿಗೆ ಬೂದುಗುಂಬಳಕಾಯಿಗಳನ್ನು ಒಡೆಯುವ ಮೂಲಕ ದೃಷ್ಠಿಯನ್ನೂ ತೆಗೆಯಲಾಗಿದೆ.

ಚಿನ್ನಸ್ವಾಮಿ ಸ್ಟೇಡಿಯಂನ ಆವರಣದಲ್ಲಿಯೇ ನಿರ್ಮಿಸಲಾದ ಸ್ಮಾರಕಕ್ಕೆ ʻಮೆಮೋರಿ ಆಫ್ ಫ್ಯಾನ್ಸ್ ಜೂನ್-4 2025ʼ ಎಂದು ಹೆಸರಿಡಲಾಗಿದೆ. ಇನ್ನು ಆರ್​ಸಿಬಿ ಈಗಾಗಲೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಸೀಟುಗಳು ಹಾಗೆಯೇ ಖಾಲಿ ಬಿಡುವುದಾಗಿ ಹೇಳಿದೆ. ಇದೇ ವಿಚಾರವಾಗಿ ಮಾತನಾಡಿದ ಕೆಎಸ್​ಸಿಎ ಅಧ್ಯಕ್ಷ ವೆಂಕಟೇಶ್​ ಪ್ರಸಾದ್​, ಆ ಸೀಟುಗಳನ್ನು ಎಂದಿಗೂ ಮಾರಾಟ ಮಾಡುವುದಿಲ್ಲ ಎಂದಿದ್ದಾರೆ.

Also Read : IPL 2026: “ಈ ಬಾರಿ ಸವಾಲು ಅಷ್ಟು ಸುಲಭವಲ್ಲ : ಸಹ ಆಟಗಾರರಿಗೆ ವಿರಾಟ್ ಕೊಹ್ಲಿ ಖಡಕ್ ಎಚ್ಚರಿಕೆ

IPL 2026 rcb fans memorial chinnaswamy stadium homa Havana news

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories