RCB Returns Home : ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ನ್ಯೂಸ್ : ಚಿನ್ನಸ್ವಾಮಿಯಲ್ಲಿ ಪಂದ್ಯಾವಳಿ ನಡೆಸಲು ರಾಜ್ಯ ಸರ್ಕಾರದಿಂದ ಅಸ್ತು

RCB Returns Home : ಕನ್ನಡಿಗ ಕ್ರಿಕೆಟ್ ಅಭಿಮಾನಿಗಳ ಅಭಿಲಾಷೆಯನ್ನು ಈಡೇರಿಸುವ ನಿಟ್ಟಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಮತ್ತೊಮ್ಮೆ ಅವಕಾಶ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದು ಆರ್ಸಿಬಿ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲ ಎಂಬಂತಾಗಿದೆ.
ವಿಧಾನಸೌಧದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಕ್ರೀಡಾಂಗಣದಲ್ಲಿ ಎಷ್ಟು ಜನಸಂದಣಿ ಸಾಧ್ಯವೋ ಅಷ್ಟು ಮಾತ್ರ ಟಿಕೆಟ್ ಮಾರಾಟವಾಗಬೇಕು. ದೊಡ್ಡ ಗೇಟ್, ಆಂಬುಲೆನ್ಸ್ ವ್ಯವಸ್ಥೆ ಸೇರಿದಂತೆ ಕುನ್ಹಾ ಅವರ ವರದಿಯ ಶಿಫಾರಸ್ಸಿನ ಆಧಾರದಲ್ಲಿ ಕ್ರಮ ಕೈಗೊಂಡು ಪಂದ್ಯ ಆಯೋಜನೆಗೆ ಅನುಮತಿ ನೀಡಲಾಗಿದೆ ಎಂದಿದ್ದಾರೆ.
Also Read : ಬಿಸಿಸಿಐ ವಾರ್ಷಿಕ ಗುತ್ತಿಗೆ : ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಹಿಂಬಡ್ತಿ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದರೂ ಸಹ ಆರ್ಸಿಬಿ ತಂಡ ಈ ಮೈದಾನದಲ್ಲಿ ಕಣಕ್ಕಿಳಿಯಲಿದೆಯೇ ಎಂಬುದು ಇಂದಿಗೂ ಕುತೂಹಲಕಾರಿ ಪ್ರಶ್ನೆಯಾಗಿಯೇ ಉಳಿಯಲಿದೆ.
ಈ ಬಗ್ಗೆ ಬಿಸಿಸಿಐನಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಈ ಸಂಬಂಧ ಶೀಘ್ರದಲ್ಲಿಯೇ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವುದಾಗಿ ತಿಳಿಸಿದೆ.
Aslo Read : ಕೆ.ಎಲ್. ರಾಹುಲ್ ಶತಕದ ಅಬ್ಬರ: ಮುಂಬೈ ಮಣಿಸಿ ಸೆಮಿಫೈನಲ್ಗೆ ಲಗ್ಗೆ ಇಟ್ಟ ಕರ್ನಾಟಕ
RCB Returns Home Karnataka Govt Permits IPL 2026 Matches at Chinnaswamy Stadium



