ಬುಧವಾರ, ಜೂನ್ 18, 2025
HomeBreakingಬಾಂಬರ್ ಆದಿತ್ಯ ರಾವ್ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್

ಬಾಂಬರ್ ಆದಿತ್ಯ ರಾವ್ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್

- Advertisement -

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಇಟ್ಟು ಇದೀಗ ಪೊಲೀಸರ ಅತಿಥಿಯಾಗಿರೋ ಆದಿತ್ಯ ರಾವ್ ವಿರುದ್ದ ಮತ್ತೊಂದು ಕೇಸ್ ದಾಖಲಾಗಿದೆ. ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲೀಗ ಬಜಪೆ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

IMG 20200120 WA0096

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಬೆನ್ನಲ್ಲೇ ಆದಿತ್ಯ ರಾವ್ ಇಂಡಿಗೋ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಹುಸಿ ಬಾಂಬ್ ಕರೆ ಮಾಡಿದ್ದಾನೆ. ಇಂಡಿಗೋ ವಿಮಾನದಲ್ಲಿ ಬಾಂಬ್ ಇದೆ ಅನ್ನೋ ಸುದ್ದಿ ತಿಳಿಯುತ್ತಿದ್ದಂತೆಯೇ ಏರ್ ಪೋರ್ಟ್ ಅಧಿಕಾರಿಗಳು, ಪೊಲೀಸರು ಅಲರ್ಟ್ ಆಗಿದ್ದರು. ಮಂಗಳೂರು ವಿಮಾನ ನಿಲ್ದಾಣದಲ್ಲಿಯೂ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದ್ರೀಗ ಇಂಡಿಗೋ ವಿಮಾನದಲ್ಲಿ ಬಾಂಬ್ ಇರಿಸಿದ್ದಾಗಿ ಹುಸಿ ಕರೆ ಮಾಡಿದ್ದು ಕೂಡ ತಾನೇ ಎನ್ನುವುದನ್ನು ಆದಿತ್ಯ ರಾವ್ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ಇಂಡಿಗೋ ವಿಮಾನದ ಮುಖ್ಯಸ್ಥರು ಈ ಬಗ್ಗೆ ಬಜಪೆ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ.

Bajpe Police Station

ಈ ಹಿನ್ನೆಲೆಯಲ್ಲಿ ಆದಿತ್ಯ ರಾವ್ ವಿರುದ್ದ ಮಂಗಳೂರಲ್ಲಿ ಮತ್ತೊಂದು ದೂರು ದಾಖಲಾದಂತಾಗಿದೆ. ಈ ಹಿಂದೆ ಆದಿತ್ಯ ರಾವ್ ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೂ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಮಾಡಿ ಜೈಲು ಶಿಕ್ಷೆ ಅನುಭವಿಸಿದ್ದ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular