ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರ ಫೈರಿಂಗ್ :ಇಬ್ಬರಿಗೆ ಗುಂಡೇಟು

0

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಇಬ್ಬರು ರೌಡಿಶೀಟರ್ ಗಳ ಕಾಲಿಗೆ ಸಿಸಿಬಿ ಪೊಲೀಸರ ಗುಂಡೇಟು ಬಿದ್ದಿದೆ.
ಸತೀಶ್ ಮತ್ತು ಮಹೇಶ್ ಅಲಿಯಾಸ್ ಹಂದಿ ಮಹೇಶ್ ಗುಂಡೇಟು ತಿಂದ ರೌಡಿಶೀಟರ್ ಗಳು. ರೌಡಿಶೀಟರ್ ಸತೀಶ್ ಮೇಲೆ ಐದು ಪ್ರಕರಣಗಳು, ಹಂದಿ ಮಹೇಶ್ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ನಗರ ಮೈಕೋ ಲೇಔಟ್ ಬಳಿಯ ರಂಕಾ ಕಾಲೋನಿಯಲ್ಲಿ ಇಬ್ಬರು ಇರುವ ಖಚಿತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಸಿಸಿಬಿ ಇನ್‍ಸ್ಪೆಕ್ಟರ್ ಗಳಾದ ಪುನೀತ್, ಕೇಶವಮೂರ್ತಿ ಮತ್ತವರ ತಂಡ ಇಬ್ಬರನ್ನು ಸೆರೆಹಿಡಿಯಲು ಯತ್ನಿಸಿದ್ದರು.
ಈ ವೇಳೆ ಪೊಲೀಸ್ ಪೇದೆ ಹನುಮೇಶ್ ಎಂಬವರಿಗೆ ಚಾಕುವಿನಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಲು ಇಬ್ಬರು ಯತ್ನಿಸಿದ್ದರು. ತಕ್ಷಣ ಅಲರ್ಟ್ ಆದ ಇಬ್ಬರು ಇನ್‍ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಇಬ್ಬರು ರೌಡಿಶೀಟರ್ ಗಳ ಕಾಲಿಗೆ ಗುಂಡೇಟು ಹೊಡೆದು ಖೆಡ್ಡಾಗೆ ಬೀಳಿಸಿದ್ದಾರೆ. ಪೇದೆ ಮತ್ತು ಇಬ್ಬರು ಆರೋಪಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ತನಿಖೆ ಮುಂದುವರೆದಿದೆ.

Leave A Reply

Your email address will not be published.