ಮಂಗಳೂರು ಪೊಲೀಸರಿಗೆ ಆದಿತ್ಯರಾವ್ ಹಸ್ತಾಂತರ

0

ಬೆಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯರಾವ್ ಆರೋಗ್ಯ ತಪಾಸಣೆ ನಡೆಸಲಾಗಿದೆ. ವೈದ್ಯರು ಆದಿತ್ಯರಾವ್ ಆರೋಗ್ಯವಾಗಿದ್ದಾನೆ ಅಂತಾ ವರದಿ ನೀಡಿದ್ದಾರೆ. ಹೀಗಾಗಿ ಬೆಂಗಳೂರು ಪೊಲೀಸರು ಆರೋಪಿಯನ್ನು ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆಯಷ್ಟೇ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಬಾಂಬ್ ಇಟ್ಟಿದ್ದ. ಎರಡು ದಿನಗಳ ನಂತರ ಆದಿತ್ಯ ರಾವ್ ಬೆಂಗಳೂರು ಪೊಲೀಸರ ಮುಂದೆ ಶರಣಾಗಿದ್ದ. ಈ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸರು ಆದಿತ್ಯ ರಾವ್ ನನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸಿದ್ದಾರೆ. ಇದರ ಬೆನ್ನಲ್ಲೇ ಎಸಿಪಿ ಬೆಳ್ಳಿಯಪ್ಪ ನೇತೃತ್ವದ ಮಂಗಳೂರು ಪೊಲೀಸರ ತಂಡ ಬೆಂಗಳೂರಿಗೆ ತೆರಳಿದೆ. ಹೀಗಾಗಿ ಹಲಸೂರು ಗೇಟ್ ಪೊಲೀಸರು ಆರೋಪಿ ಆದಿತ್ಯ ರಾವ್ ನನ್ನು ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಮಧ್ಯಾಹ್ನ 3 ಗಂಟೆಯ ನಂತರದಲ್ಲಿ ಆದಿತ್ಯ ರಾವ್ ನನ್ನು ಪೊಲೀಸರು ವಿಮಾನ ಮೂಲಕ ಕೆರೆದೊಯ್ಯೋ ಸಾಧ್ಯತೆಯಿದೆ.
ಎಂ.ಎಸ್.ರಾಮಯ್ಯದಲ್ಲಿ ವೈದ್ಯಕೀಯ ತಪಾಸಣೆ
ಆರಂಭದಲ್ಲಿ ಆದಿತ್ಯ ರಾವ್ ನನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲು ನಿರ್ಧರಿಸಲಾಗಿತ್ತು. ಆದರೆ ಭದ್ರತೆಯ ಹಿನ್ನೆಲೆಯಲ್ಲಿ ಪೊಲೀಸರು ಗುಪ್ತವಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ವೈದ್ಯಕೀಯ ಚಿಕಿತ್ಸೆ ನಡೆಸಲಾಗಿದೆ. ವೈದ್ಯಕೀಯ ತಪಾಸಣೆ ನಡೆಸಿರೋ ವೈದ್ಯರು ಆದಿತ್ಯ ರಾವ್ ಆರೋಗ್ಯವಾಗಿದ್ದಾನೆ. ಅಲ್ಲದೇ ಆತನನ್ನು ಮಂಗಳೂರಿಗೆ ಕರೆದೊಯ್ಯಬಹುದು ಅಂತಾ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದೇ ಆದಿತ್ಯ ರಾವ್ ನನ್ನು ಮಂಗಳೂರಿಗೆ ಕರೆದೊಯ್ಯಲಾಗುತ್ತದೆ.

Leave A Reply

Your email address will not be published.