ಮಂಗಳೂರು : ಬಿಜೆಪಿ ಕಾರ್ಯಕರ್ತನ ಮೇಲೆ ನಾಲ್ವರ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮುಂಚೂರು ಎಂಬಲ್ಲಿ ನಡೆದಿದೆ. ಮುಂಚೂರು ನಿವಾಸಿಯಾಗಿರೋ ಯಶೋಧರಾ (28 ವರ್ಷ) ಎಂಬವರೇ ಗಾಯಗೊಂಡಿರುವ ಕಾರ್ಯಕರ್ತ. ಗಾಯಗೊಂಡಿರುವ ಯಶೋಧರಾ ಅವರನ್ನು ಪದ್ಮಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲ್ಕಿ ಹಾಗೂ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪರ ಕಾರ್ಯನಿರ್ವಹಿಸಿದ್ದ ಯಶೋಧರ ಮೇಲೆ ಕಣ್ಣಿಟ್ಟಿದ್ದ ತಂಡ ಈ ಕೃತ್ಯವೆಸಗಿದೆ ಎನ್ನಲಾಗುತ್ತಿದೆ. ಆರೋಪಿಗಳಾಗಿರೋ ದಿವಾಕರ, ದಿನೇಶ್ ಶೆಟ್ಟಿ, ಅಶ್ವಿತ್ ಕುಲಾಲ್, ಯಶೋಧರ ಅಗರಮೇಲು ವಿರುದ್ದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದ್ದು, ಆರೋಪಿಗಳು ತಲೆ ಮರೆಯಿಸಿಕೊಂಡಿದ್ದಾರೆ.