ಭಾನುವಾರ, ಏಪ್ರಿಲ್ 27, 2025
HomeCrimeTeachers Death : ಶಾಲೆಯಿಂದ ಮರಳುತ್ತಿದ್ದ ಶಿಕ್ಷಕರ ಬೈಕ್‌ ಗೆ ಲಾರಿ ಢಿಕ್ಕಿ : ಶಿಕ್ಷಕರಿಬ್ಬರು...

Teachers Death : ಶಾಲೆಯಿಂದ ಮರಳುತ್ತಿದ್ದ ಶಿಕ್ಷಕರ ಬೈಕ್‌ ಗೆ ಲಾರಿ ಢಿಕ್ಕಿ : ಶಿಕ್ಷಕರಿಬ್ಬರು ಸಾವು

- Advertisement -

ವಿಜಯಪುರ : ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆಯಲ್ಲಿ ಲಾರಿ ಹಾಗೂ ಬೈಕ್‌ ನಡುವೆ ನಡೆದ ಅಪಘಾತದಲ್ಲಿ ಶಿಕ್ಷಕರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಬರಟಗಿ ಎಲ್.ಟಿ.ಸರಕಾರಿ ಮಾಧ್ಯಮಿಕ ಶಾಲೆಯ ಮುಖ್ಯೋಪಾಧ್ಯಾಯ ಕೆ.ಎಚ್.ಹುದ್ದಾರ ಹಾಗೂ ಸಹಶಿಕ್ಷಕ ಸಂಗನಗೌಡ ಪಾಟೀಲ್‌ ಎಂಬವರೇ ಮೃತ ಶಿಕ್ಷಕರು ಎಂದು ಗುರುತಿಸಲಾಗಿದೆ. ಇಬ್ಬರೂ ಶಿಕ್ಷಕರು ಕೂಡ ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತ ನಡೆಯುತ್ತಿದ್ದಂತೆಯೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಕುರಿತು ವಿಜಯಪುರ ನಗರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular