Accident News:ಕ್ರೂಸರ್ – ಟ್ರ್ಯಾಕ್ಟರ್ ಭೀಕರ ಅಪಘಾತ : ದಂಪತಿ ಸಾವು, 9 ಮಂದಿಗೆ ಗಾಯ

ವಿಜಯಪುರ:( Accident Couple Killed) ಕ್ರೂಸರ್‌ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿ, 9 ಮಂದಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ್ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ. ಗಾಯಾಳುಗಳನ್ನು ಮಹಾರಾಷ್ಟ್ರದ ಸೊಲ್ಲಾಪುರ ಆಸ್ಪತ್ರೆಗೆ ದಾಖಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.

(Accident News)ಮೃತರನ್ನು ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಭಯ್ಯಾಜಿ ಶಿಂಧೆ (50ವರ್ಷ) ಹಾಗೂ ಸುಮಿತ್ರಾ ಶಿಂಧೆ (45 ವರ್ಷ) ಎಂದು ಗುರುತಿಸಲಾಗಿದೆ. ಅಥಣಿಯಿಂದ ಕ್ರೂಸರ್ ಮೂಲಕ ಮಹಾರಾಷ್ಟ್ರದ ಅಕ್ಕಲಕೋಟ ಬಳಿಯ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದರು. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ ಬಳಿಯ ರಾಷ್ಟ್ರೀಯ ಹೆದ್ದಾರಿ ಸಂಚರಿಸುತ್ತಿದ್ದ ವೇಳೆಯಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಕ್ರೂಸರ್ ಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕ್ರೂಸರ್ ನಲ್ಲಿದ್ದ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ ಕ್ರೂಸರ್ ನಲ್ಲಿದ್ದ ಉಳಿದ ಒಂಬತ್ತು ಮಂದಿಗೆ ಗಂಭೀರ ಗಾಯವಾಗಿದೆ. ಸ್ಥಳೀಯರ ಸಹಕಾರದೊಂದಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸುವ ಕಾರ್ಯವನ್ನು ಮಾಡಲಾಗಿದೆ.

ಇದನ್ನೂ ಓದಿ:Bande mutt Swamiji: ಬಂಡೆಮಠ ಸ್ವಾಮೀಜಿ ಸಾವಿನ ಹಿಂದೆ ಹನಿಟ್ರ್ಯಾಪ್ ಜಾಲ ಶಂಕೆ: ಅಸಲಿಗೆ ವಿಡಿಯೋದಲ್ಲೇನಿದೆ

ಇದನ್ನೂ ಓದಿ:Parking Dispute:ಪಾರ್ಕಿಂಗ್ ವಿಚಾರಕೆ ಕಿರಿಕ್ : ಇಟ್ಟಿಗೆಯಿಂದ ವ್ಯಕ್ತಿಯ ಹತ್ಯೆ

ಝಳಕಿ ಠಾಣೆಯ ಪೊಲೀಸರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಅಲ್ಲೇ ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲದ ಕಾರಣ ಇದರ ಬಗ್ಗೆ ತನಿಖೆ ನಡೆಸುವುದಾಗಿ ಪೋಲಿಸರು ತಿಳಿಸಿದ್ದಾರೆ. ಈ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಸಮಯ ಟ್ರಾಫಿಕ್‌ ಉಂಟಾಗಿ ಪ್ರಯಾಣಿಕರಿಗೆ ಸಂಚರಿಸಲು ತೊಂದರೆಯಾಗಿತ್ತು. ಸದ್ಯ ಪೊಲೀಸರು ಅಪಘಾತಕ್ಕೆ ಒಳಗಾದ ವಾಹನವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಸುಲಭ ಮಾಡಿ ಕೊಟ್ಟಿದ್ದಾರೆ.

Cruiser-Tractor Horrible Accident: Couple Killed, 9 Injured

Comments are closed.