Attempt to murder : ಹಾಡಹಗಲೇ ವ್ಯಕ್ತಿ ಮೇಲೆ ಡೆಡ್ಲಿ ಅಟ್ಯಾಕ್:‌ ಕಲ್ಲು ಎತ್ತಿ ಹಾಕಿ ಕೊಲೆ ಯತ್ನ

ಕೊಪ್ಪಳ : (Attempt to murder) ಹಾಡಹಗಲೇ ವ್ಯಕ್ತಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿರುವ ಭೀಕರ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ಯುವಕರ ಗುಂಪೊಂದು ಈ ದಾಳಿ ನಡೆಸಿದ್ದು, ಮಾರುತಿ ಅಲಿಯಾಸ್‌ ಸಲಗನ ಮೇಲೆ ದಾಳಿ ನಡೆದಿದೆ. ಇದೀಗ ಸಂತ್ರಸ್ತ ಮಾರುತಿಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಗಂಗಾವತಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ಹತ್ತಕ್ಕೂ ಹೆಚ್ಚು ಮಂದಿಯ ಯುವಕರ ಗುಂಪೊಂದು ವ್ಯಕ್ತಿಯೋರ್ವನ ಮೇಲೆ ದಾಳಿ ನಡೆಸಿದೆ. ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಯತ್ನ ನಡೆಸಲಾಗಿದೆ. ಸದ್ಯ ಸಂತ್ರಸ್ತ ವ್ಯಕ್ತಿಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭೀಕರ ದಾಳಿ ಎಲ್ಲರಲ್ಲೂ ಭಯ ಹುಟ್ಟಿಸುವಂತಿದೆ.

ಯಾವ ಕಾರಣಕ್ಕಾಗಿ ಕೃತ್ಯ ನಡೆಸಲಾಗಿದೆ ಎಂದು ತಿಳಿದುಬಂದಿಲ್ಲ. ಸದ್ಯ ಘಟನೆಯ ಕುರಿತು ಗಂಗಾವತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ.

ಬೀದಿ ನಾಯಿಯೊಂದಿಗೆ ಅಸಹಜ ಕೃತ್ಯವೆಸಗಿದ ವ್ಯಕ್ತಿ: ದೂರು ದಾಖಲು

ಪಾಟ್ನಾ: ಬೀದಿ ನಾಯಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ಬಿಹಾರದ ರಾಜಧಾನಿ ಪಾಟ್ನಾದಿಂದ ಬೆಳಕಿಗೆ ಬಂದಿದೆ. ಮಾರ್ಚ್ 8, ಹೋಳಿ ದಿನದಂದು ಈ ಘಟನೆ ಸಂಭವಿಸಿದ್ದು, ಈ ಭೀಕರ ಕೃತ್ಯದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಫುಲ್ವಾರಿ ಶರೀಫ್‌ನ ಫೈಸಲ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : Rape of dog: ಬೀದಿ‌ ನಾಯಿಯ ಮೇಲೆ ಅತ್ಯಾಚಾರ : ಕಾಮುಕನ ವಿರುದ್ದ ಪ್ರಕರಣ ದಾಖಲು

ಸಿಸಿಟಿವಿ ದೃಶ್ಯಾವಳಿಯಲ್ಲಿ, ಅಪರಿಚಿತ ವ್ಯಕ್ತಿಯೊಬ್ಬನು ಕಾಲೋನಿಯಲ್ಲಿ ನಾಯಿಯೊಂದಿಗೆ ಅಸಹಜ ಕೃತ್ಯವನ್ನು ಬಹಿರಂಗವಾಗಿ ಮಾಡುತ್ತಿರುವುದು ಕಂಡುಬಂದಿದೆ. ಇದರ ನಂತರ, ಫುಲ್ವಾರಿ ಷರೀಫ್ ಪೊಲೀಸ್ ಠಾಣೆಯಲ್ಲಿ ಎನ್‌ಜಿಒವೊಂದು ಈ ವಿಷಯದ ಬಗ್ಗೆ ಅರ್ಜಿ ಸಲ್ಲಿಸಿದೆ. ಇದಾದ ಬಳಿಕ ಪಾಟ್ನಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ. ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ, ಫುಲ್ವಾರಿ ಷರೀಫ್ ಮನೀಶ್ ಕುಮಾರ್, “ಅರ್ಜಿ ಬಂದಿದೆ ಮತ್ತು ದಾಖಲೆಯೊಂದಿಗೆ ಕರೆ ಮಾಡಲಾಗಿದೆ, ಐಪಿಸಿ ಮತ್ತು ಪ್ರಾಣಿಗಳ ಕಾಯಿದೆಯಡಿ ಕ್ರಮ ಕೈಗೊಳ್ಳಲಾಗುವುದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದರು. ಇದೀಗ ಅಪರಿಚಿತ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

Attempt to murder: Deadly attack on a person in the morning

Comments are closed.