ಮಂಗಳೂರು : ಬಾಬುಗುಡ್ಡೆಯಲ್ಲಿರುವ ಬಬ್ಬುಸ್ವಾಮಿ ಕ್ಷೇತ್ರದ ಕಾಣಿಕೆ ಡಬ್ಬದಲ್ಲಿ ಅವಹೇಳನಕಾರಿ ಬರಹದ ನೋಟುಗಳು ಪತ್ತೆಯಾಗಿದೆ. ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿ ಭಕ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಮಂಗಳೂರು ನಗರದ ಅತ್ತಾವರದಲ್ಲಿರುವ ಬಾಬುಗು್ದೆಯಲ್ಲಿರುವ ಬಬ್ಬುಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಡಬ್ಬಿ ಒಡೆಯಲಾಗಿತ್ತು. ಈ ವೇಳೆಯಲ್ಲಿ ಬಬ್ಬುಸ್ವಾಮಿ ಕ್ಷೇತ್ರ ಹಾಗೂ ಸಮೀಪದಲ್ಲಿರುವ ಮತ್ತೊಂದು ಕ್ಷೇತ್ರದಲ್ಲಿ ಕಾಣಿಕೆ ಡಬ್ಬ ಒಡೆಯಲಾಗಿತ್ತು. ಈ ವೇಳೆಯಲ್ಲಿ ಕಾಗದ ಹಾಗೂ ನೋಟುಗಳ ಮೇಲೆ ಅವಹೇಳನಕಾರಿ ಬರಹಗಳನ್ನು ಬರೆದಿರುವುದು ಕಂಡುಬಂದಿದೆ. ಅಲ್ಲದೇ ಹಲವು ಪ್ರಚೋದನಾಕಾರಿ ಬರಹಗಳನ್ನೂ ಕೂಡ ಬರೆಯಲಾಗಿತ್ತು. ಅಷ್ಟೇ ಅಲ್ಲಾ ಗಾಂಧೀಜಿ ಅವರ ಚಿತ್ರವನ್ನು ವಿರೂಪ ಮಾಡಲಾಗಿತ್ತು.
ಕಿಡಿಗೇಡಿಗಳ ದುಷ್ಕೃತ್ಯದ ಕುರಿತು ಭಕ್ತರು ಬಬ್ಬುಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ.
ಕಡಿಕೇಡಿಗಳ ಕೃತ್ತದ ಕುರಿತು ದೈವಸ್ಥಾನದ ಆಡಳಿತ ಮಂಡಳಿಯವರು ಪೊಲೀಸರಿಗೆ ದೂರು ನೀಡಿದ್ದು, ಪಾಂಡೇಶ್ವರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆಯನ್ನು ನಡೆಸಿದ್ದಾರೆ. ಮಹಾನಗರ ಪಾಲಿಕೆ ಸದಸ್ಯರಾದ ಶೈಲೇಶ್ ಶೆಟ್ಟಿ, ಭರತ್ ಕುಮಾರ್ ಎಸ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರತೀಂದ್ರನಾಥ್ ಎಚ್ ಸೇರಿದಂತೆ ಹಲವು ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.