Belthangady crime : ಬೆಳ್ತಂಗಡಿ : ಅಕ್ಕಪಕ್ಕದ ‌ಮನೆಯ ಇಬ್ಬರು ಯುವತಿಯರು ಅನುಮಾ‌ನಾಸ್ಪದವಾಗಿ ಸಾವು

ಬೆಳ್ತಂಗಡಿ : (Belthangady crime) ಅಕ್ಕಪಕ್ಕದ ಮನೆಯ ಇಬ್ಬರು ಯುವತಿಯರು ಹೊಟ್ಟೆ ನೋವಿನಿಂದ ನರಳಿ ನಂತರ ಇಬ್ಬರು ಸಾವನ್ನಪ್ಪಿದ ಘಟನೆ ತಾಲೂಕಿನ ಪಟ್ರಮೆ ಗ್ರಾಮದಲ್ಲಿ ನಡೆದಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಅವರ ಪುತ್ರಿ ರಕ್ಷಿತಾ (22 ವರ್ಷ) ಹಾಗೂ ನೆರೆ ಮನೆಯವರಾದ ಶ್ರೀನಿವಾಸ ಆಚಾರ್ಯ ಅವರ ಪುತ್ರಿ ಲಾವಣ್ಯ (21 ವರ್ಷ) ಮೃತ ಯುವತಿಯರು.

ಎಪ್ರಿಲ್ 4ರಂದು ಸಂಜೆ ರಕ್ಷಿತಾ ಮತ್ತು ಲಾವಣ್ಯ ಮನೆಯಲ್ಲಿ ಹೊಟ್ಟೆ ನೋವೆಂದು ಹೇಳಿ ನರಳಾಡಿ ತೀವ್ರ ಅಸ್ವಸ್ಥಗೊಂಡಿದ್ದರು. ಇಬ್ಬರನ್ನು ಸ್ಥಳೀಯರ ಸಹಕಾರದಲ್ಲಿ ನೆಲ್ಯಾಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ರಕ್ಷಿತಾರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮನೆಯವರು ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಲಾವಣ್ಯರನ್ನು ಅವರ ಮನೆಯವರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಬಳಿಕ ಸುರತ್ಕಲ್‌ನ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ ಚಿಕಿತ್ಸೆ ಫಲಿಸದೆ ರಕ್ಷಿತಾ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮುಂಜಾನೆ ಮೃತಪಟ್ಟರೆ, ಲಾವಣ್ಯ ಮಧ್ಯಾಹ್ನ ಸುರತ್ಕಲ್‌ನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಯುವತಿಯರಿಬ್ಬರೂ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರಲ್ಲಿ ರಕ್ಷಿತಾ ವಿಷ ಪದಾರ್ಥ ಸೇವಿಸಿರುವುದು ಮರಣೋತ್ತರ ಪರಿಕ್ಷೆಯಲ್ಲಿ ದೃಢಪಟ್ಟಿದೆ. ಲಾವಣ್ಯಾ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಮರಣೋತ್ತರ ವರದಿ ಬಳಿಕ ಸಾವಿಗೆ ಕಾರಣ ತಿಳಿಯಬೇಕಿದೆ.

ಇದನ್ನೂ ಓದಿ : ಕುಮಟಾ : ಮೀನು ಸಾಗಾಟದ ವಾಹನದಲ್ಲಿ ಗೋಮಾಂಸ

ಇದನ್ನೂ ಓದಿ : 27 ಮಹಿಳೆಯರೊಂದಿಗೆ ಮದುವೆಯಾಗಿದ್ದ ಭೂಪನಿಗೆ ಇಡಿ ಕಂಟಕ

ಅಕ್ಕಪಕ್ಕದ ಮನೆಯವರಾದ ಇಬ್ಬರೂ ಸ್ನೇಹಿತೆಯರಾಗಿದ್ದು, ಒಂದೇ ಕಡೆ ಉದ್ಯೋಗ ಮಾಡುತ್ತಿದ್ದರು ಎನ್ನಲಾಗಿದೆ. ಮೇಲ್ನೋಟಕ್ಕೆ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇದಲ್ಲದೇ ಬೇರೇನಾದರೂ ಘಟನೆ ಸಂಭವಿಸಿದೆಯೇ ಎಂಬುದು ತನಿಖೆಯಿಂದ ತಿಳಿಯಬೇಕಿದೆ. ಇದೀಗ ಪ್ರಕರಣದ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : Mangaluru Crime : ಕೋಳಿ ಸಾರಿನ ವಿಚಾರಕ್ಕೆ ಮಗನನ್ನೇ ಕೊಂದ ತಂದೆ

Belthangady crime: Belthangady: Two young women from neighboring houses died suspiciously.

Comments are closed.