5 Student died : ಕೆಎಸ್‌ಆರ್‌ಟಿಸಿ ಬಸ್‌ – ಕಾರು ನಡುವೆ ಭೀಕರ ಅಪಘಾತ : ಬೇಲೂರು ಕಾಲೇಜಿನ 5 ವಿದ್ಯಾರ್ಥಿಗಳು ಸಾವು

ಹಾಸನ : ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ವಿದ್ಯಾರ್ಥಿಗಳು (5 Student died) ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿ ಎಂಬಲ್ಲಿ ನಡೆದಿದೆ.

ಬೇಲೂರಿನ ವಿದ್ಯಾ ವಿಕಾಸ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳಾದ ಮೊಹಮ್ಮದ್‌ ಜಲಾಜಿ, ಅಕ್ಮಲ್‌ ಖಾನ್‌, ಕೈಪ್‌ ಸೇರಿದಂತೆ ಒಟ್ಟು ಐದು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಬೇಲೂರಿನ ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿಗ ತಮ್ಮ ಕಾರಿನಲ್ಲಿ ಹಾಸನ ಕಡೆಗೆ ತೆರಳುತ್ತಿದ್ದರು. ಈ ವೇಳೆಯಲ್ಲಿ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ.

ಅಪಘಾತ ನಡೆಯುತ್ತಿದ್ದಂತೆಯೇ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಉಳಿದಂತೆ ಓರ್ವ ವಿದ್ಯಾರ್ಥಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿಯೇ ಅಸುನೀಗಿ ದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದ್ದು, ಬಸ್ಸಿನಲ್ಲಿ ಹಲವರು ಗಾಯಗೊಂಡಿದ್ದಾರೆ. ಬೇಲೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಆದರೆ ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕಾರು ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ರೈಲಿಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಶೌಚಾಲಯದಲ್ಲಿ ಅತ್ಯಾಚಾರ : ಆರೋಪಿ ಪರಾರಿ

ಇದನ್ನೂ ಓದಿ : ಮದುವೆಯಾಗೋಣ ಎಂದು ಕರೆದು ಪೆಟ್ರೋಲ್‌ ಸುರಿದು ಬೆಂಕಿ ಇಟ್ಟ : ಪ್ರೇಮಿಯ ಹುಚ್ಚಾಟಕ್ಕೆ ತಹಶೀಲ್ದಾರ ಪುತ್ರಿ ಬಲಿ

( Belur road accident ksrtc bus and alto car accident 5 Student died)

Comments are closed.